ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನು ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ‘ರೆಡ್ ಅಲರ್ಟ್’ ಘೋಷಿಸಿದೆ.
ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಬೆಳಗಾವಿ, ಹಾವೇರಿ, ಧಾರವಾಡ, ಹಾಸನ, ಮೈಸೂರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 45-50 ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸಲಿದೆ.
ಇದನ್ನೂ ಓದಿ: ದೆಹಲಿಯಲ್ಲಿ ಮಳೆಯಬ್ಬರಕ್ಕೆ ಒಂದೇ ದಿನ 8 ಮಂದಿ ಬಲಿ!
ರಾಯಚೂರು, ಯಾದಗಿರಿ, ಬೀದರ್, 3 ಗದಗ, ಕಲಬುರಗಿ, ಚಿಕ್ಕಬಳ್ಳಾಪುರ, ಬೆಂಗಳೂರು, ದಾವಣಗೆರೆ, ಕೋಲಾರ, ಮಂಡ್ಯ ಜಿಲ್ಲೆಯಲ್ಲೂ ಮಳೆಯಾಗುವ ಸಾಧ್ಯತೆಗಳಿವೆಎಂದು ಇಲಾಖೆಯೂ ತಿಳಿಸಿದೆ