Thursday, July 4, 2024

ದರ್ಶನ್‌ ಪ್ರಕರಣ: ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತೆ- ಶಿವಣ್ಣ ಫಸ್ಟ್‌ ರಿಯಾಕ್ಷನ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿರುವ ನಟ ದರ್ಶನ್​ ಕುರಿತು ಇದೇ ಮೊದಲ ಬಾರಿಗೆ ನಟ ಶಿವರಾಜ್​ ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಕನ್ನಡ ಚಿತ್ರರಂಗದ ನಿರ್ಮಾಕರದ ಸಂಘದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾದ್ಯಮ ಪ್ರತಿಕ್ರಿಯೆ ನೀಡಿದರು. ಏನು ಮಾಡೋಕೆ ಆಗಲ್ಲ ಹಣೆ ಬರಹ ಅಂತ ಬಂದಾಗ ನಾವು ಏನೇ ಮಾತನಾಡೋಕೆ ಹೋದರು ತಪ್ಪಾಗುತ್ತದೆ ಎಂದಿದ್ದಾರೆ. ಈ ಘಟನೆಯ ಬಗ್ಗೆ ಬೇಸರ ಆಗುತ್ತದೆ. ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತದೆ. ಈ ಘಟನೆಯಿಂದ ರೇಣುಕಾಸ್ವಾಮಿ ಮತ್ತು ದರ್ಶನ್ ಫ್ಯಾಮಿಲಿಗೂ ನೋವಾಗಿರುತ್ತದೆ. ನಾವು ಎಂದಿಗೂ ನ್ಯಾಯಕ್ಕೆ ತಲೆ ಬಾಗಲೇಬೇಕು ಎಂದಿದ್ದಾರೆ.

ಇದನ್ನೂ ಓದಿ: ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

ನನ್ನ ಭೇಟಿಗೆ ಯಾರು ಬರಬೇಡಿ:

ನಟ ದರ್ಶನ್​ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದ ಜೈಲು ಸೇರಿದ ಬಳಿಕ ದರ್ಶನ್​ ಭೇಟಿಗೆ ಸ್ಯಾಂಡಲ್​ವುಡ್​ ಸ್ಟಾರ್​ಗಳು ಬರುತ್ತಿದ್ದರೆ. ಇದೇ ವೇಳೆ ತಮ್ಮ ನೆಚ್ಚಿನ ನಟನನ್ನು ನೋಡಲು ದೂರದೂರುಗಳಿಂದ ಆಗಮಿಸುತ್ತಿದ್ದಾರೆ. ಜೈಲು ನಿಯಮದ ಪ್ರಕಾರ ಎಲ್ಲರನ್ನೂ ಭೇಟಿಯಾಗಲು ಸಾಧ್ಯವಿಲ್ಲದ ಕಾರಣ ನನ್ನ ಭೇಟಿಗೇ ಯಾರು ಬರಬೇಡಿ ಎಂದು ನಟ ದರ್ಶನ್​ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES