Sunday, July 7, 2024

ಯುವತಿಯರ ಮುಂದೆ ಪ್ರಶ್ನೆ ಮಾಡಿದಕ್ಕೆ ಕೊಲೆ ಮಾಡಿದ ವಿದ್ಯಾರ್ಥಿ

ಬೆಂಗಳೂರು: ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಡಿಸಿಪ್ಲೀನರಿ ಇನ್ ಚಾರ್ಜ್ ಹತ್ಯೆ ಕೇಸ್​ಗೆ ಸಂಬಂಧಿಸಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಇನ್ನು ಕಾಲೇಜು ಯುವತಿಯರ ಮುಂದೆ ವಿದ್ಯಾರ್ಥಿಯನ್ನು ತಡೆದಿದ್ದಕ್ಕೆ ಸಿಬ್ಬಂದಿ ಹೆಣ ಬಿದ್ದಿದೆ. ಅಮೃತಹಳ್ಳಿ ಸಿಂಧಿ ಕಾಲೇಜಿನಲ್ಲಿ‌ ನಿನ್ನೆ ಕಾನ್ವೋಕೇಶನ್ ಡೇ ಆಯೋಜಿಸಲಾಗಿತ್ತು. ಕಾರ್ಯಕ್ರಮ ಶುರುವಾಗಿ ಮುಗಿಯುವವರೆಗೂ ವಿದ್ಯಾರ್ಥಿಗಳು ಪದೇ ಪದೇ ಓಡಾಡದಂತೆ ಸೂಚಿಸಲಾಗಿತ್ತು.

ಆದರೆ ಕೊಲೆ ಆರೋಪಿ ಭಾರ್ಗವ್ ಕಾರ್ಯಕ್ರಮ ಶುರುವಾದಾಗಿನಿಂದ ಐದಾರು ಭಾರಿ ಓಡಾಡಿದ್ದ. ಹೀಗಾಗಿ ಇದನ್ನ ಪ್ರಶ್ನಿಸಿ ವಾರ್ನ್ ಮಾಡಿದಕ್ಕೆ ಡಿಸಿಪ್ಲೀನರಿ ಇನ್ ಚಾರ್ಜ್ ಜೈಕಿಶೋರ್ ರಾಯ್ ಕೊಲೆಯಾಗಿದೆ. ಕಾಲೇಜು ಯುವತಿಯರ ಮುಂದೆ ಪ್ರಶ್ನಿಸಿದ್ದಕ್ಕೆ ಕೋಪಗೊಂಡಿದ್ದ ಆರೋಪಿ ಭಾರ್ಗವ್ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: ದರ್ಶನ್‌ಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಭಾರ್ಗವ್ ಮೂಲತಃ ಅಸ್ಸಾಂ ಮೂಲದವನು. ಅಮೃತಹಳ್ಳಿ ಬಳಿ ಪಿಜಿಯಲ್ಲಿ ವಾಸವಿದ್ದು ಸಿಂಧಿ ಕಾಲೇಜಿನಲ್ಲಿ ಪೈನಲ್ ಇಯರ್ ಬಿ.ಎ ವ್ಯಾಸಾಂಗ ಮಾಡ್ತಿದ್ದ. ನಿನ್ನೆ ಸೆಕ್ಯೂರಿಟಿ ಗಾರ್ಡ್ ಜೊತೆ ಗಲಾಟೆಯಾದ ನಂತರ ಪಿಜಿಗೆ ತೆರಳಿ ಚಾಕು ತಂದಿದ್ದ. ಕೇವಲ 15 ಸೆಕೆಂಡ್ ನಲ್ಲಿ ಐದಾರು ಭಾರಿ ಸೆಕ್ಯೂರಿಟಿ ಗಾರ್ಡ್ ಎದೆಗೆ ಮನಸೋ ಇಚ್ಚೆ ಇರಿದು ಹತ್ಯೆ ಮಾಡಿದ್ದಾನೆ. ಸದ್ಯ ಅಮೃತಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES