Monday, July 8, 2024

ಟಿಕೆಟ್ ಕಿರಿಕಿರಿಗೆ ಮುಕ್ತಿ ನೀಡಲು ಮುಂದಾದ KSRTC

ಬೆಂಗಳೂರು: ಟಿಕೆಟ್ ಕೊಡುವ ಸಂದರ್ಭದಲ್ಲಿ ಪ್ರಯಾಣಿಕರು ಮತ್ತು ಕಂಡಕ್ಟರ್​​ಗಳ ಮಧ್ಯೆ ಚಿಲ್ಲರೆಗಾಗಿ ಯಾವಾಗಲೂ ಜಗಳ ನಡೆಯುತ್ತಲೇ ಇರುತ್ತದೆ. ಈ ರೀತಿಯ ಕಿರಿಕಿರಿಗಳಿಗೆ ಮುಕ್ತಿಹಾಡಲು ಕೆಎಸ್​ಆರ್​ಟಿಸಿ ಮುಂದಾಗಿದೆ. ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮೂಲಕ ಹಣ ಪಾವತಿಸಲು ಪ್ರಯಾಣಿಕರಿಗೆ ಅವಕಾಶ ಕಲ್ಪಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ಕೆಎಸ್​ಆರ್​ಟಿಸಿ ಮುಂದಾಗಿದೆ. ಶೀಘ್ರದಲ್ಲೇ ಈ ವ್ಯವಸ್ಥೆ ಅನುಷ್ಠಾನಗೊಳ್ಳುವ ನಿರೀಕ್ಷೆ ಇದೆ.

ಖಾಸಗಿ ಕಂಪೆನಿಯಿಂದ ಒಂದು ಮಷಿನ್​​ಗೆ ಪ್ರತಿ ತಿಂಗಳು 645 ರೂಪಾಯಿ ಬಾಡಿಗೆ ಆಧಾರದಲ್ಲಿ 10245 ಸಾವಿರ ಇಟಿಎಂ ಟಿಕೆಟ್ ಮಷಿನ್​​ಗಳ ಖರೀದಿಗೆ ಕೆಎಸ್​ಆರ್​ಟಿಸಿ ಮುಂದಾಗಿದೆ. ಇದರಿಂದ ಇನ್ಮುಂದೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಗೂಗಲ್ ಪೇ, ಫೋನ್ ಪೇ. ಪೇಟಿಎಂ ಮೂಲಕ ಹಣ ಪಾವತಿ ಮಾಡಿ ಟಿಕೆಟ್ ಪಡೆದು ಪ್ರಯಾಣಿಸಬಹುದಾಗಿದೆ. ಈ ನೂತನ ಮಷಿನ್​​ಗಳಲ್ಲಿ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್​​​ಗಳನ್ನು ಬಳಸಿಯೂ ಹಣ ಪಾವತಿ ಮಾಡಬಹುದು.

ಇದನ್ನೂ ಓದಿ: ಆಷಾಡ ಮಾಸದ ವಾರಾಹಿ ನವರಾತ್ರಿಯಲ್ಲಿ ದೇವಿಯ ಆರಾಧನೆ ವಿಶೇಷತೆ ಏನು ಗೊತ್ತಾ?

ಸದ್ಯ ಈಗ ಇರುವ ಮಷಿನ್​​ಗಳು ರೋಡ್ ಮಧ್ಯೆ ಕೈಕೊಟ್ಟು ಪ್ರಯಾಣಿಕರು ಮತ್ತು ಕಂಡಕ್ಟರ್ ಜೊತೆಗೆ ಜಗಳವಾಗುತ್ತಿದೆ. ಹೊಸ ಮಷಿನ್​ನಿಂದ ಇದು ತಪ್ಪಲಿದೆ. ಇತ್ತೀಚೆಗೆ ಕೆಎಸ್​ಆರ್​ಟಿಸಿ ಬಸ್​​​ಗಳಲ್ಲಿ ಪ್ರಯಾಣ ಮಾಡುವ ಹೆಚ್ಚಿನವರ ಬಳಿ ಕ್ಯಾಶ್ ಇರುವುದಿಲ್ಲ. ಹಾಗಾಗಿ ಪ್ರಯಾಣಿಕರ ಅನಕೂಲಕ್ಕಾಗಿ ಇಟಿಎಂ ಸಹಕಾರಿ ಆಗಲಿದೆ. ನಿಗಮದ 6500 ಬಸ್ಸುಗಳಲ್ಲೂ ಹೊಸ ವ್ಯವಸ್ಥೆ ಪರಿಚಯ ಮಾಡಲಾಗುತ್ತದೆ. ಶಕ್ತಿ ಯೋಜನೆಯ ಪಿಂಕ್‌ ಟಿಕೆಟ್​​​ಗಳನ್ನು ಈ ಇಟಿಎಂ ಮಷಿನ್ ಗಳಲ್ಲಿ ಸ್ಕ್ಯಾನ್ ಮಾಡಿ ಅವಕಾಶ ನೀಡುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗುತ್ತಿದೆ. ಈ ಬಗ್ಗೆ ಪ್ರಯಾಣಿಕರು ಕೂಡ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ..

RELATED ARTICLES

Related Articles

TRENDING ARTICLES