Saturday, October 5, 2024

ಹಾಸ್ಟೆಲ್​ ಊಟ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬೆಂಗಳೂರು: ವಸತಿ ಶಾಲೆಯ ಊಟ ಸೇವಿಸಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ ಬೇದಿಯಿಂದ ಅಸ್ವಸ್ತಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಯಚೂರಿನ ಮಾನ್ವಿಯಲ್ಲಿ ನಡೆದಿದೆ.

ಇಲ್ಲಿನ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿನ ವಿದ್ಯಾರ್ಥಿಗಳು ಎಂದಿನಂತೆ ರಾತ್ರಿ ಊಟ ಸೇವನೆ ಮಾಡಿದ್ದಾರೆ. ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ ಬೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಸಮಸ್ಯೆ ಉಲ್ಬಣವಾಗಿ ತೀವ್ರ ಅಸ್ವಸ್ತಗೊಂಡ ಎಲ್ಲಾ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೂಡಲೇ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ​ ವರದಕ್ಷಿಣೆ ಕಿರುಕುಳ: ಗೃಹಿಣಿ ನೇಣಿಗೆ ಶರಣು

ಇನ್ನು ಘಟನೆಗೆ ಅಡುಗೆ ಮಾಡಲು ಬ್ಲೀಚಿಂಗ್​ ಅಂಶದ ನೀರು ಬಳಸಿದ ನೀರು ಬಳಕೆಯೇ ಕಾರಣ ಎಂದು ಶಂಕೆ ವ್ಯಕ್ತವಾಗಿದ್ದು, ನಿಖರವಾದ ಕಾರಣ ಇನ್ನಷ್ಟೆ ತಿಳಿಯಬೇಕಾಗಿದೆ.

RELATED ARTICLES

Related Articles

TRENDING ARTICLES