Sunday, September 8, 2024

ಬಾವಿಗೆ ಎಸೆದು 2 ತಿಂಗಳ ಹಸುಗೂಸು ಕೊಲೆ

ಯಾದಗಿರಿ: ಎರಡು ತಿಂಗಳ ಹಸುಗೂಸನ್ನು ಬಾವಿಗೆ ಎಸೆದು ಕೊಲೆ ಮಾಡಿರುವ ಘಟನೆ ನಗರದ ಅಂಬೇಡ್ಕರ್​ ಬಡಾವಣೆಯಲ್ಲಿ ನಡೆದಿದೆ.

ನಾಗೇಶ್​, ಚಿಟ್ಟಮ್ಮ ದಂಪತಿಯ (2 ತಿಂಗಳು) ಮಗು ಮೀನಾಕ್ಷಿ, ಮೃತ ನತದೃಷ್ಟ ಹಸುಗೂಸು, ಬಡಾವಣೆಯ ಹೊರವಲಯದ ನಿರ್ಜನ ಪ್ರದೇಶದಲ್ಲಿರುವ ಬಾವಿಗೆ ಎಸೆದು ಹೆಣ್ಣು ಮಗುವನ್ನು ಕೊಲೆ ಮಾಡಲಾಗಿದೆ. ಹೆಣ್ಣು ಮಗುವೆಂಬ ಕಾರಣಕ್ಕೆ ಬಾವಿಗೆ ಎಸೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಆಮ್ಲೆಟ್​ನಲ್ಲಿ ಕಲ್ಲು ಸಿಕ್ಕಿದ್ದನ್ನು ಪ್ರಶ್ನಿಸಿದ್ದಕ್ಕೆ ಗ್ರಾಹಕನ ಮೇಲೆ ಬಿಯರ್​ ಬಾಟಲಿಯಿಂದ ಹಲ್ಲೆ

ಮೃತ ಮಗುವಿನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು, ಘಟನಾ ಸ್ಥಳಕ್ಕೆ ಯಾದಗಿರಿ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದೂ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES