ಬೆಂಗಳೂರು: ಆಮ್ಲೆಟ್ನಲ್ಲಿ ಕಲ್ಲು ಸಿಕ್ಕಿದ್ದನ್ನು ಪ್ರಶ್ನಿಸಿದ್ದಕ್ಕೆ ಬಾರ್ ಕ್ಯಾಶಿಯರ್ ಹಾಗು ಸಪ್ಲೇಯರ್ ಸೇರಿ ಗ್ರಾಹಕನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿರುವ ಘಟನೆ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಪ್ಪ ಗೇಟ್ ನಿವಾಸಿ ಬಾಬು (30) ವರ್ಷ, ಹಲ್ಲೆಗೊಳಗಾದ ವ್ಯಕ್ತಿ, ಬಾರ್ ಕ್ಯಾಶಿಯರ್ ಸಮಂತ್ ಹಾಗು ಸಪ್ಲೇಯರ್ ಜೀವನ್ ಗೌಡ ಹಲ್ಲೆ ನಡೆಸಿದ ಆರೋಪಿಗಳು, ಆಮ್ಲೆಟ್ನಲ್ಲಿ ಕಲ್ಲು ಸಿಕ್ಕಿದ್ದನ್ನು ಪ್ರಶ್ನಿಸಿದ್ದಕ್ಕೆ ಬಿಯರ್ ಬಾಟಲಿಯಿಂದ ಬಾಬು ಮೇಲೆ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ: ಹಾಸ್ಟೆಲ್ ಊಟ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರೀತಿಧಾಮ ಬಾರ್ ನಲ್ಲಿ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಬಾಬು ಎಂಬಾತ ಮದ್ಯದ ಜೊತೆಗೆ ಆಮ್ಲೆಟ್ ಆರ್ಡರ್ ಮಾಡಿದ್ದ, ಆಮ್ಲೆಟ್ ತಿನ್ನುವಾಗ ಕಲ್ಲು ಸಿಕ್ಕಿದೆ ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಬಾರ್ ಕ್ಯಾಶಿಯರ್ ಹಾಗು ಸಪ್ಲೇಯರ್ ಏಕಾಏಕಿ ಬಿಯರ್ ಬಾಟಲಿಯಿಂದ ಗ್ರಾಹಕನ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಗ್ರಾಹಕ ಬಾಬು ತಲೆಗೆ ತೀವ್ರವಗಿ ಪೆಟ್ಟಾಗಿದೆ. ಈ ಘಟನೆಯೂ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.