Sunday, September 8, 2024

ಬೈಕ್ ಟಾಟಾ ಏಸ್ ನಡುವೆ ಅಪಘಾತ: ಬೈಕ್ ಸವಾರನ ಕಾಲು ಮೂಳೆ ಮುರಿತ

ಧಾರವಾಡ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡ ನವನಗರ ಎಪಿಎಂಸಿಯಲ್ಲಿ ನಡೆದಿದೆ.

ಧಾರವಾಡ ನವನಗರ ಎಪಿಎಂಸಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಅಮರಗೋಳ ನಿವಾಸಿ ಖಲಂದರ್ (45) ಎಂಬುವವರ ಕಾಲಿಗೆ ಬಲವಾದ ಪೆಟ್ಟು ಬಿದ್ದು ಎರಡು ಕಾಲಿನ ಮೂಳೆ ಮುರಿದಿವೆ ಎಂದು ತಿಳಿದು ಬಂದಿದೆ. ಟಾಟಾ ಏಸ್ ಚಾಲಕನ ಅತಿ ವೇಗವೇ ಈ ಘಟನೆಗೆ ಕಾರಣವೆಂಬುದನ್ನು ಸ್ಥಳೀಯರಿಂದ ಆರೋಪಿಸಿದ್ದಾರೆ.

ಇದನ್ನೂ ಓದಿ: ಮೊಬೈಲ್​ ಚಾರ್ಜಿಂಗ್​ ಮಾಡುವಾಗ ವಿದ್ಯುತ್ ಶಾಕ್​: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಗಂಭೀರವಾಗಿ ಗಾಯಗೊಂಡ ಖಲಂದರನನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ನವನಗರ ಎಪಿಎಂಸಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.

RELATED ARTICLES

Related Articles

TRENDING ARTICLES