Saturday, October 5, 2024

ಕಾಲ್ತುಳಿತಕ್ಕೆ ಕಾರಣರಾದವರನ್ನು ಬಿಡಬಾರದು: ಬೋಲೇನಾಥ ಬಾಬಾ

ಹತ್ರಾಸ್ ಕಾಲ್ತುಳಿತದ ಬಗ್ಗೆ ಬೋಲೇನಾಥ ಬಾಬಾ ವಿಡಿಯೋ ಮೂಲಕ ಹೇಳಿಕೆ ನೀಡಿದ್ದು, ಜುಲೈ 2ರ ಘಟನೆ ಬಗ್ಗೆ ನನಗೆ ತೀವ್ರ ನೋವಾಗಿದೆ. ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಸರ್ಕಾರ ಮತ್ತು ಆಡಳಿತದಲ್ಲಿ ನಂಬಿಕೆ ಇರಲಿ. ಈ ಕಾಲ್ತುಳಿತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲ್ಲ ಎಂಬ ನಂಬಿಕೆ ನನಗಿದೆ. ನಮ್ಮ ವಕೀಲರಾದ ಎ.ಪಿ.ಸಿಂಗ್ ಮೂಲಕ ಸಂತ್ರಸ್ತ ಕುಟುಂಬಗಳ ಪರ ನಿಲ್ಲಲು ಸಮಿತಿಯ ಸದಸ್ಯರಿಗೆ ಮನವಿ ಮಾಡಿದ್ದೇನೆ. ಗಾಯಾಳುಗಳಿಗೆ ಸಹಾಯ ಮಾಡಲು ಸಮಿತಿಯ ಸದಸ್ಯರಿಗೆ ಹೇಳಿದ್ದೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ; ಅರ್ಜುನನ ಸಮಾಧಿ ಸ್ಮಾರಕ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

ಜುಲೈ 2 ರಂದು 121 ಜನರನ್ನು ಬಲಿತೆಗೆದುಕೊಂಡ ಹತ್ರಾಸ್ ಕಾಲ್ತುಳಿತದ ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ನಿನ್ನೆ ರಾತ್ರಿ ದೆಹಲಿಯಲ್ಲಿ ಪೊಲೀಸರ ಮುಂದೆ ಶರಣಾಗಿದ್ದು, ಉತ್ತರ ಪ್ರದೇಶ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಮಧುಕರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಉತ್ತರ ಪ್ರದೇಶ ಪೊಲೀಸರು ಘೋಷಿಸಿದ್ದರು.

RELATED ARTICLES

Related Articles

TRENDING ARTICLES