ಶಿವಮೊಗ್ಗ: ಜೂನ್ 30 ರಂದು ಮನೆಯಿಂದ ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪೂಜಾ ಎ.ಕೆ (24) ಮೃತ ಯುವತಿ, ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿಯಾಗಿದ್ದ ಪೂಜಾ. ಜೂನ್.30 ರಂದು ಮನೆಯಿಂದ ಕೆಲಸಕ್ಕೆಂದು ಹೋಗಿ ಮತ್ತೆ ವಾಪಾಸ್ ಆಗಿರಲಿಲ್ಲ, ಇದರಿಂದ ಗಾಬರಿಗೊಂಡ ಯುವತಿಯ ತಂದೆ ಕುಶಾಲ್ ಆಗುಂಬೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇದನ್ನೂ ಓದಿ: ಬೆಳ್ಳಂ ಬೆಳಗ್ಗೆ ಬಾಯ್ಲರ್ ಸ್ಪೋಟ: ಕೂದಲೆಳೆ ಅಂತರದಲ್ಲಿ ಕಾರ್ಮಿಕರು ಪಾರು
ಪ್ರಕರಣದ ವಿಚಾರಣೆ ಕೈಗೊಂಡ ಪೊಲೀಸರು ಆರೋಪಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದೂ, ಪೂಜಾ ಕೊಲೆಗೆ ಆಕೆಯ ಸ್ನೇಹಿತ ಮಣಿಕಂಠನೇ ಕಾರಣ ಎಂಬ ಸತ್ಯವನ್ನು ಬೇದಿಸಿದ್ದಾರೆ. ಈ ಕೊಲೆ ಮಾಡಿದ್ದು ತಾನೆ ಎಂದು ಆರೋಪಿ ಮಣಿಕಂಠ ಒಪ್ಪಿಕೊಂಡಿದ್ದಾನೆ. ಘಟನೆ ಸಂಬಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.