ಬೆಂಗಳೂರು:ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನು 5 ದಿನಗಳ ಕಾಲ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 11ರವರೆಗೂ ಮಳೆ ಇರಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನು ಓದಿ:‘ನಾನು ಬಾಸ್ ಎನ್ನುವುದು ಇಬ್ಬರಿಗೆ ಮಾತ್ರ’-ನಟ ಸುದೀಪ್
ಇನ್ನು ಉತ್ತರ ಒಳನಾಡಿನ ಬೆಳಗಾವಿಗೆ ಇಂದಿನಿಂದ ಜುಲೈ 10ರ ವರೆಗೆ ಯಲ್ಲೋ ಅಲರ್ಟ್ ನೀಡಿದ್ದು ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮಳೆಯ ಅಲರ್ಟ್ ನೀಡಲಾಗಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಐದು ದಿನದ ಮಳೆಯ ಅಲರ್ಟ್ ನೀಡಿದ್ದು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ನಿರಂತರ ಗಾಳಿ ಮತ್ತು ಹಗುರದಿಂದ ಸಾಧಾರಣ ಮಳೆಯಾಗಲಿದೆ.