Tuesday, September 17, 2024

26 ಕುಟುಂಬದ ಅವಲಂಬಿತರಿಗೆ ಅನುಕುಂಪದ ನೌಕರಿ ನೀಡಿ: ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿವಿಧ ಇಲಾಖೆಗಳಿಗೆ ಸಂಬಂಧಿಸಿಂತೆ ಅಧಿಕಾರಿಗಳೊಂದಿಗೆ ಸಾಲು ಸಾಲು ಸಭೆಗಳನ್ನು ನಡೆಸಿದರು. ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ದೌರ್ಜನ್ಯ ತಡೆ ಸಮಿತಿ ಸಭೆಗಳನ್ನು ನಿಯಮಿತವಾಗಿ ನಡೆಸದೇ ಇರುವುದಕ್ಕೆ  ಅಧಿಕಾರಿಗಳ ವಿರುದ್ದ ಸಿಎಂ ಗರಂ ಆದರು.

ವಿಧಾನಸೌಧದಲ್ಲಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಉಪವಿಭಾಗಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮೂರು ತಿಂಗಳಿಗೊಮ್ಮೆ ಸಭೆ ನಡೆಸುವುದನ್ನು ಯಾವುದೇ ಕಾರಣಕ್ಕು ತಪ್ಪಿಸಬಾರದು. ಸಭೆಯನ್ನೇ ನಡೆಸದ 13 ಉಪ ವಿಭಾಗಗಳ ಬಗ್ಗೆ ಜಿಲ್ಲಾಧಿಕಾರಿಗಳನ್ನು ಸಿಎಂ ಖಾರವಾಗಿ ಪ್ರಶ್ನಿಸಿದರು.

ಸಿಂಧುತ್ವ ಪ್ರಮಾಣಪತ್ರ ವಿಚಾರದಲ್ಲಿ ಅಸಡ್ಡೆ ಬೇಡ. ಅರ್ಹರಾಗಿದ್ದರೆ ತಕ್ಷಣ ಕೊಡಿ, ಅರ್ಹತೆ ಇಲ್ಲದಿದ್ದರೆ ಸ್ಪಷ್ಟವಾಗಿ‌ ತಿಳಿಸಿ ಸತಾಯಿಸಬೇಡಿ ಎಂದರು. ಇನ್ನು, ದೌರ್ಜನ್ಯ ತಡೆ ಅಧಿನಿಯಮದಡಿಯಲ್ಲಿ ಕೊಲೆ ಪ್ರಕರಣಗಳಲ್ಲಿ ತಡ ಮಾಡದೆ ಅನುಕಂಪದ ಸರ್ಕಾರಿ ನೌಕರಿ ನೀಡಿ ಎಂದು ಸೂಚನೆ ನೀಡಿದರು.

ಇದನ್ನೂ ಓದಿ: ಡೆಂಗ್ಯು ತಡೆ: ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸೂಚನೆ

26 ಕುಟುಂಬದ ಅವಲಂಬಿತರಿಗೆ ಅನುಕುಂಪದ ನೌಕರಿ:

ಸಮಾಜ ಕಲ್ಯಾಣ ದೌರ್ಜನ್ಯ ತಡೆ ಅಧಿನಿಯಮದ ಅಡಿ ದಾಖಲಾಗಿರುವ ಒಟ್ಟು 26 ಕೊಲೆ ಪ್ರಕರಣಗಳಲ್ಲಿ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಬೇಕಾಗಿದ್ದು, ಆದಷ್ಟು ಬೇಗನೆ ನೌಕರಿ ಒದಗಿಸಬೇಕು. ಜಿಲ್ಲೆಯಲ್ಲಿ ಉಪ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ನಡೆಸಬೇಕು ಎಂದರು.

ಸಿಂಧುತ್ವ ಪ್ರಮಾಣ ಪತ್ರವನ್ನು ಒಂದು ತಿಂಗಳ ಒಳಗಾಗಿ ನೀಡಬೇಕು. ಪ್ರಸ್ತುತ 2684 ಅರ್ಜಿಗಳು ಬಾಕಿಯಿದ್ದು, ಅರ್ಹತೆ ಇದ್ದವರಿಗೆ ತಕ್ಷಣ ಪ್ರಮಾಣ ಪತ್ರ ನೀಡಬೇಕು. ವಿನಾಕಾರಣ ಸಿಂಧುತ್ವ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದರೆ ಜಿಲ್ಲಾಧಿಕಾರಿ ಅವರನ್ನೇ ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಂಬೇಡ್ಕರ್‌ ಭವನ ನಿರ್ಮಾಣ ಕಾಮಮಗಾರಿ ಹಲವು ಕಡೆ ಅರ್ಧದಲ್ಲಿ ನಿಂತಿದ್ದು, ಕಾಮಗಾರಿ ಪೂರ್ಣಗೊಳಿಸುವ ಕುರಿತು ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

RELATED ARTICLES

Related Articles

TRENDING ARTICLES