Friday, September 20, 2024

ಕೋಟ್ಯಂತರ ಯುವ ಜನತೆಯ ಕನಸು ಭಗ್ನಗೊಳಿಸಿದ ಮೋದಿ: ಖರ್ಗೆ

ನವದೆಹಲಿ: ಯುವ ಜನತೆಯನ್ನು ನಿರುದ್ಯೋಗಿಗಳನ್ನಾಗಿ ಮಾಡುವುದೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಏಕೈಕ ಗುರಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಆರೋಪ ಮಾಡಿದ್ದಾರೆ. ಈ ಸಂಬಂಧ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿರುವ ಅವರು, ದೇಶದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಜೈಲೂಟ ಜೀರ್ಣವಾಗುತ್ತಿಲ್ಲ, ಮನೆಯೂಟಕ್ಕಾಗಿ ‘ದಾಸ’ ರಿಟ್​ ಅರ್ಜಿ

ನಿರುದ್ಯೋಗ ಸಂಬಂಧ ‘ಸಿಟಿಗ್ರೂಪ್’ ಸ್ವತಂತ್ರ ವರದಿಯನ್ನು ಮೋದಿ ಸರ್ಕಾರ ನಿರಾಕರಿಸಬಹುದು. ಆದರೆ ಸರ್ಕಾರಿ ದತ್ತಾಂಶವನ್ನು ನಿರಾಕರಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ ಕೋಟ್ಯಂತರ ಯುವ ಜನತೆಯ ಕನಸು ಭಗ್ನಗೊಳ್ಳಲು ನರೇಂದ್ರ ಮೋದಿ ಸರ್ಕಾರವೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

ರಾಷ್ಟ್ರೀಯ ಮಾದರಿ ಸಮೀಕ್ಷೆ ಕಚೇರಿಯ ಸಮೀಕ್ಷಾ ವರದಿಯನ್ನು ಮಲ್ಲಿಕಾರ್ಜುನ ಖರ್ಗೆ ಉಲ್ಲೇಖಿಸಿದ್ದಾರೆ. 2015ರಿಂದ 2023ರ ನಡುವೆ ಏಳು ವರ್ಷಗಳ ಅವಧಿಯಲ್ಲಿ ಅಸಂಘಟಿತ ವಲಯದಲ್ಲಿ 54 ಲಕ್ಷ ಉದ್ಯೋಗಗಳು ನಷ್ಟವಾಗಿವೆ ಎಂದು ಹೇಳಿದ್ದಾರೆ. ಸರ್ಕಾರಿ ಉದ್ಯೋಗ, ಖಾಸಗಿ ವಲಯ, ಸ್ವಯಂ ಉದ್ಯೋಗ ಅಥವಾ ಅಸಂಘಟಿತ ವಲಯವೇ ಆಗಿರಲಿ, ನಿರುದ್ಯೋಗಿಗಳನ್ನಾಗಿ ಮಾಡುವುದೇ ಮೋದಿ ಸರ್ಕಾರದ ಗುರಿಯಾಗಿದೆ ಎಂದು ಆರೋಪಿಸಿದ್ದಾರೆ.

RELATED ARTICLES

Related Articles

TRENDING ARTICLES