ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲುಪಾಲಾಗಿ ಇಂದಿಗೆ ಒಂದು ತಿಂಗಳು ಕಳೆದಿದೆ.
ಪವಿತ್ರಾಗೌಡ ಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಬೆಂಗಳೂರಿನ ಪಟ್ಟಣಗೆರೆ ಕಾರ್ ಶೆಡ್ ಒಂದರಲ್ಲಿ ಇರಿಸಿ ಹಲ್ಲೆ, ಚಿತ್ರ ಹಿಂಸೆ ನೀಡಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಸಹಚರರನ್ನು ಬಂಧಿಸಿ ಜೈಲಿನಲ್ಲಿರಿಸಲಾಗಿದೆ.
ಇದನ್ನೂ ಓದಿ: ನಟ ದರ್ಶನ್ ಭೇಟಿಗೆ ಬಂದ ಅಕ್ಕ, ಭಾವ ಮತ್ತು ಅಳಿಯ
ಜೂನ್ 11ರಂದು ಮೈಸೂರಿನಲ್ಲಿ ನಟ ದರ್ಶನ್ ರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರಲಾಗಿತ್ತು. ಬಳಿಕ ವಿಚಾರಣಾಧೀನ ಕೈದಿಯಾಗಿ ಬಂಧನದಲ್ಲಿರಿಸಲಾಗಿದೆ. ನಟ ದರ್ಶನ್ ಜೈಲುಪಾಲಾಗಿ ಇಂದಿಗೆ ಒಂದು ತಿಂಗಳು ಕಳೆದಿದೆ.
ಸದ್ಯ ಪರಪ್ಪನ ಅಗ್ರಹಾರದ ಜೈಲಿನ ಒಂದೇ ಕೋಣೆಯಲ್ಲಿ ಮಂಕಾಗಿರುವ ನಟ ದರ್ಶನ್ ಅವರ ಭೇಟಿಗೆ ಕುಟುಂಬಸ್ಥರು ಆಗಮಿಸಿದ್ದರು. ದರ್ಶನ್ ರ ಅಕ್ಕ, ಭಾವ, ಅಳಿಯ ಬಂದಿದ್ದರು. ಬಳಿಕ ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ವಿನೀಶ್ ಕೂಡ ಭೇಟಿ ನೀಡಿದ್ದರು. ಇದೇ ವೇಳೆ ಬೇಲ್ ಕುರಿತು ಪತ್ನಿ ವಿಜಯಲಕ್ಷ್ಮಿ ಜೊತೆಗೆ ಕೆಲ ಮಾತುಕತೆಯಾಡಿದ್ದರು ಎನ್ನಲಾಗಿದೆ.