Sunday, September 8, 2024

ಬಹುಶಃ ಸಿದ್ದರಾಮಯ್ಯನವರ ಬಾಯಲ್ಲಿ ಮಚ್ಚೆ ಇದೆ: ನಿಖಿಲ್

ರಾಮನಗರ: ಕಳೆದ ಲೋಕಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯನವರು ಮಂಡ್ಯದಲ್ಲಿ ನಿಂತು ಕುಮಾರಸ್ವಾಮಿ ಗೆಲ್ಲಲ್ಲ ಅಂತ ಭಾಷಣ ಮಾಡಿಹೋಗಿದ್ದರು. ಆದರೀಗ ಕುಮಾರಸ್ವಾಮಿ ಅವರು ಗೆದ್ದು ಕೇಂದ್ರದಲ್ಲಿ ಉನ್ನತ ಮಂತ್ರಿ ಸ್ಥಾನ ಅಲಂಕರಿಸಿದ್ದಾರೆ. ಬಹುಶಃ ಸಿದ್ದರಾಮಯ್ಯನವರ ಬಾಯಲ್ಲಿ ಮಚ್ಚೆ ಇದೆ ಅನ್ನಿಸುತ್ತೆ. ಅವರು ಆಗಲ್ಲ ಅಂದರೆ ಅದು ಆಗುತ್ತೆ. ಮುಂದೆ ಕುಮಾರಸ್ವಾಮಿ ಅವರು ಕೂಡಾ ಸಿಎಂ ಆಗಬಹುದು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಕುಮಾರಸ್ವಾಮಿ ಮತ್ತೆ ಅಧಿಕಾರಕ್ಕೆ ಬರೋದಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಲೇವಡಿಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಅಕ್ರಮ; ಸಿಬಿಐನಿಂದ ತನಿಖೆ ತೀವ್ರಗೊಳಿಸಿ: ಅಮಿತ್ ಶಾಗೆ ಶೋಭಾ ಕರಂದ್ಲಾಜೆ ಪತ್ರ

ಸಿದ್ದರಾಮಯ್ಯನವರ ಹಾಸ್ಯಾಸ್ಪದ ಹೇಳಿಕೆ ಗಮನಿಸಿದ್ದೇನೆ. 2018ರಲ್ಲೂ ಇದೇ ರೀತಿ ಕುಮಾರಸ್ವಾಮಿ ಅವರಪ್ಪರಾಣೆ ಸಿಎಂ ಆಗಲ್ಲ ಎಂದು ಹೇಳಿದ್ದರು. ಆದರೆ ಚುನಾವಣಾ ಫಲಿತಾಂಶ ಬಂದ ನಂತರ ಕಾಂಗ್ರೆಸ್‌ನ ಮಹಾ ನಾಯಕರೆಲ್ಲರೂ ಕುಮಾರಸ್ವಾಮಿ ಮನೆ ಬಾಗಿಲಿಗೆ ಬಂದು ನಿಂತಿದ್ದರು ಎಂದು ಟೀಕಿಸಿದರು.

RELATED ARTICLES

Related Articles

TRENDING ARTICLES