Tuesday, September 17, 2024

ನಿರೂಪಕಿ ಅಪರ್ಣ ನಿಧನ: ಅಂತಿಮ ದರ್ಶನಕ್ಕೆ ಬಂದ ಮಜಾ ಟಾಕೀಸ್​ ತಂಡ!

ಕನ್ನಡ ಸಿನಿಮಾ ರಂಗ ಕಂಡ ಅದ್ಭುತ ಪ್ರತಿಭೆ ನಿರೂಪಕಿ, ನಟಿ ಅಪರ್ಣಾ ಇಹಲೋಕ ತ್ಯಜಿಸಿದ್ದಾರೆ. ಶ್ವಾಸಕೋಶದ ಕ್ಯಾನ್ಸ್​ರ್​​ನಿಂದ ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಇವರ ಸಾವಿನ ಸುದ್ದಿ ತಿಳಿದು ಗಣ್ಯಾತಿ ಗಣ್ಯರು, ಚಿತ್ರರಂಗದ ನಟ ನಟಿಯರೂ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: ಪುಟ್ಟಣ್ಣ ಪರಿಚಯಿಸಿದ ತಾರೆ ಅಪರ್ಣಾ..‘ಮಸಣ’ ಸೇರಿದ ‘ಹೂವು’

ಅಪರ್ಣ ಕಿರುತೆರೆ ಹಾಗೂ ಹಿರಿತೆರೆ ಲೋಕದಲ್ಲೂ ಕೂಡ ಮಿಂಚಿದ್ದರು ಈ ನಟಿ. ಅಪರ್ಣಾ ಅವರ ಸಾವು ಚಿತ್ರರಂಗಕ್ಕೆ ದೊಡ್ಡ ನಷ್ಟವನ್ನು ಉಂಟು ಮಾಡಿದೆ. ಅವರು ಪಾರ್ಥಿವ ಶರೀರ ನೋಡಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಚಿತ್ರರಂಗದ ಗಣ್ಯರು ಕೂಡ ಬಂದಿದ್ದಾರೆ.

ಮಜಾ ಟಾಕೀಸ್​​​ ಕಾಮಿಡಿ ಮೂಲಕವೇ ಹೆಸರು ಮಾಡಿದ್ದ ವರಲಕ್ಷ್ಮೀ (ಅಪರ್ಣಾ) ಇನ್ನು ಮುಂದೆ ಇಲ್ಲ ಎಂಬ ಸುದ್ದಿ ಕೇಳಿ ಮಜಾ ಟಾಕೀಸ್ ತಂಡ ಓಡೋಡಿ ಬಂದಿದೆ. ಅವರು ಜತೆಗೆ ಈ ಶೋನಲ್ಲಿ ನಡೆಸಿದ್ದ ನಟರು ಹಾಗೂ ಸಿಬ್ಬಂದಿಗಳು ಅವರು ಪಾರ್ಥಿವ ಶರೀರ ನೋಡಿ ಕಣ್ಣೀರು ಹಾಕಿದ್ದಾರೆ. ನಟಿ ಶ್ವೇತಾ ಚೆಂಗಪ್ಪ ಸೇರಿದಂತೆ ತಮ್ಮ ಗೆಳತಿಯನ್ನು ಕೊನೆಯ ಬಾರಿ ನೋಡಲು ತಂಡ ಬಂದಿದ್ದಾರೆ.

RELATED ARTICLES

Related Articles

TRENDING ARTICLES