ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಸಂಬಂಧ ನನಗೇನು ಗೊತ್ತಿಲ್ಲ ಎಂದು ಮಾಜಿ ಸಚಿವ ನಾಗೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಕರಣ ಸಂಬಂಧ ವಿಚಾರಣೆಗಾಗಿ ಕಾಂಗ್ರೆಸ್ ಮಾಜಿ ಸಚಿವ ನಾಗೇಂದ್ರ ಅವರನ್ನು ಇಂದು ಬೆಳಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇಡಿ ಕಚೇರಿಗೆ ಕರೆದೊಯ್ಯುವ ವೇಳೆ ಮಾಧ್ಯಮಗಳಿಗೆ, ನನಗೇನೂ ಗೊತ್ತಿಲ್ಲ ಎಂದಷ್ಟೇ ನಾಗೇಂದ್ರ ಅವರು ಪ್ರತಿಕ್ರಿಯಿಸಿದರು.
ಹಗರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳವರೆಗೆ ಜಾರಿ ನಿರ್ದೇಶನಾಲಯ ಶೋಧ ನಡೆಸಿತು. ಅಧಿಕಾರಿಗಳು, ಬಸನಗೌಡ ದದ್ದಲ್ ಅವರ ಮನೆ, ಕಚೇರಿಗಳಲ್ಲಿ ಪರಿಶೀಲನೆ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿತ್ತು.
ಇದನ್ನೂ ಓದಿ: ಅಪರ್ಣಾ ಅವರು ನಿರೂಪಣೆಗೆ ಘನತೆ, ಕನ್ನಡಕ್ಕೆ ಶೋಭೆ; ಅನುಶ್ರೀ
ಈ ವೇಳೆ ನಾಗೇಂದ್ರ ಆಪ್ತ ಸಹಾಯಕ ಹರೀಶ್ ಅವರನ್ನು ಇ.ಡಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿತ್ತು. ನಂತರ ವಾಪಸ್ ಕಳುಹಿಸಿತ್ತು. ಇತ್ತ ಬಸನಗೌಡ ಅವರ ವಿಚಾರಣೆಯೂ ನಡೆದಿತ್ತು.