Sunday, September 8, 2024

ಹೆದ್ದಾರಿಯಲ್ಲಿ ಮಚ್ಚು ಲಾಂಗ್​ ನಿಂದ ಯುವಕನ ಬರ್ಬರ ಕೊಲೆ! ಬೆಚ್ಚಿಬಿದ್ದ ಜನ

ಹೊಸಕೋಟೆ: ಹೆದ್ದಾರಿಯಲ್ಲಿ ಕಾರು ಅಪಘಾತ ಮಾಡಿ ಲಾಂಗು, ಮಚ್ಚು ಬೀಸಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಗಂಗಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಇದನ್ನೂ ಓದಿ: ಬೈಕ್​ಗೆ ರೆಡಿ ಮಿಕ್ಸ್​ ಸಿಮೆಂಟ್​ ಲಾರಿ ಡಿಕ್ಕಿ: ಬೈಕ್​ ಸವಾರ ಸ್ಥಳದಲ್ಲೇ ಸಾವು!

ಭಾರ್ಗವ (24) ಕೊಲೆಯಾದ ಯುವಕ, ಶುಕ್ರವಾರ ತಡರಾತ್ರಿ ಕೋಲಾರದಿಂದ ಹೊಸಕೋಟೆ ಕಡೆಗೆ ಕಾರಿನಲ್ಲಿ ಬರುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಕಾರ್​ ಚೇಸ್​ ಮಾಡಿ ಕಾರಿನ ಮುಂದೆ ಬಂದು ಬ್ರೇಕ್​ ಹಾಕಿದ್ದಾರೆ. ಈ ವೇಳೆ ಕಾರಿನ ಮುಂಭಾಗ ಹಂತಕರ ವಾಹನಕ್ಕೆ ಡಿಕ್ಕಿಯಾಗಿದೆ. ಇದನ್ನೇ ನೆಪಮಾಡಿ ಗಲಾಟೆ ಮಾಡಿದ ಆಗಂತುಕರು ಲಾಂಗು ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಬಳಿಕ ವಾಹನ ಸಮೇತ ಆರೋಪಿಗಳು ಸ್ಥಳದಿಂದ ಎಸ್ಕೇಪ್​ ಆಗಿದ್ದಾರೆ.

ಘಟನೆ ಸಂಬಂಧ ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪ್ರಕರಣ ದಾಕಲಾಗಿದೆ.

RELATED ARTICLES

Related Articles

TRENDING ARTICLES