Tuesday, September 17, 2024

ರೈತನಿಗೆ ಅವಮಾನ: ಒಂದು ವಾರ GT Mall ಬಂದ್​ಗೆ ಸಚಿವರು ಸೂಚನೆ

ಬೆಂಗಳೂರು: ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಇಂದು ರೈತನಿಗೆ ಅವಮಾನ ಮಾಡಿದ GT Mall ಕುರಿತ ಚರ್ಚೆಗಳು ನಡೆದವು. ಈ ಚರ್ಚಯಲ್ಲಿ ಮುಂದಿನ ಏಳುದಿನಗಳ ಕಾಲ ಮಾಲ್​ ಮುಚ್ಚುವಂತೆ ಸಚಿವರು ಆದೇಶಕ್ಕೆ ಸೂಚಿಸಿದರು.

ಮುಂಗಾರು ವಿಧಾನಸಭೆ ಅಧಿವೇಶನ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಅಧಿವೇಶನ ಆರಂಭದಲ್ಲೇ ಜಿಟಿ ಮಾಲ್​ ವಿಚಾರವಾಗಿ ಚರ್ಚೆ ನಡೆಯಿತು. ಬೆಂಗಳೂರಿನ ಜಿಟಿ ಮಾಲ್​ ಒಳಗಡೆ ಓರ್ವ ರೈತರಿಗೆ ಬಿಡದೆ ಅವಮಾನ ಮಾಡಿರುವ ವಿಚಾರವಾಗಿ ಚರ್ಚೆ ನಡೆಯಿತು. ರೈತನನ್ನು ಮಾಲ್ ಒಳಗಡೆ ಬಿಡದೆ ಅವಮಾನಿಸಲಾಗಿದೆ ಎಂದು ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರು ಒಕ್ಕೊರಲಿನಿಂದ ಧ್ವನಿ ಎತ್ತಿದರು.​ ಶಾಸಕರ ಒತ್ತಾಯಾಕ್ಕೆ ಮಣಿದ ಸರ್ಕಾರ ಮಾಗಡಿ ರಸ್ತೆಯಲ್ಲಿರುವ ಜಿ.ಟಿ.ಮಾಲ್​ ಅನ್ನು ಏಳು ದಿನ ಮುಚ್ಚಿಸಲಾಗುವುದು ಎಂದು ಸಚಿವ ಬೈರತಿ ಸುರೇಶ್​ ಅಧಿವೇಶಕ್ಕೆ ತಿಳಿಸಿದರು.

ಇದನ್ನೂ ಓದಿ: ಏಕಾದಶಿ ಪ್ರಯುಕ್ತ ಅಪ್ಪುಗೆ ಫೋಟೋ ಮುಂದೆ ಎಡೆ ಇಟ್ಟು ಸದ್ಗತಿ ಪೂಜೆ ಸಲ್ಲಿಸಿದ ಅಭಿಮಾನಿ ಕುಟುಂಬ

ಮಾಲ್ ಸೆಕ್ಯುರಿಟಿ ಏಜೆನ್ಸಿ ಮೇಲೆ ಕ್ರಮ ಆಗಬೇಕು. ಮಾಲ್ ಮಾಲೀಕರ ಮೇಲೆ ಎಫ್​ಐಆರ್ ಆಗಬೇಕು ಎಂದು ಗುರುಮಿಠಕಲ್ ಕಾಂಗ್ರೆಸ್​ ಶಾಸಕ ಶರಣಗೌಡ ಕಂದಕೂರ ಒತ್ತಾಯಿಸಿದರು. ಬಳಿಕ ಮಾತನಾಡಿದ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ವರದಿ ತರಿಸಿಕೊಂಡು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಇದಕ್ಕೆ ಕಾಂಗ್ರೆಸ್​ ಶಾಸಕ ಲಕ್ಷ್ಮಣ ಸವದಿ ಆಕ್ಷೇಪ ವ್ಯಕ್ತಪಡಿಸಿದ್ದು ವರದಿ ತರಿಸಿಕೊಂಡು ಏನು ಕ್ರಮ ಕೈಗೊಳ್ಳುತ್ತೀರಿ? ಸಚಿವರಾಗಿ ಈ ರೀತಿ ಮಾತಾಡಬೇಡಿ. ಇದು ರೈತರ ವಿಚಾರ ಗಂಭೀರವಾಗಿ ಪರಿಗಣಿಸಿ. ಕೂಡಲೆ ಮಾಲ್​​ಗೆ ಒಂದು ವಾರ ವಿದ್ಯುತ್​ ಸರಬರಾಜು ಬಂದ್​ ಮಾಡಿ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಒತ್ತಾಯಿಸಿದರು.

ಬಳಿಕ ವಿಧಾನಸಭೆ ಸಭಾಪತಿ ಯುಟಿ ಖಾದರ್​, ಸರ್ಕಾರ ಏನು ಕ್ರಮ ಕೈಗೊಳ್ಳುತ್ತೆ ಎಂದು ಸ್ಪಷ್ಟಪಡಿಸಿ ಎಂದು ಸಚಿವರಿಗೆ ಪ್ರಶ್ನಿಸಿದರು. ಈ ವೇಳೆ ಮಾತನಾಡಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಈಗಾಗಲೇ ಬಿಬಿಎಂಪಿ ಮುಖ್ಯ ಆಯುಕ್ತರ ಜೊತೆ ಚರ್ಚೆ ಮಾತಾಡಿದ್ದೇವೆ. 7 ದಿನ GTMall ಮುಚ್ಚಿಸಲಾಗುತ್ತದೆ. ಕಾನೂನಿನಲ್ಲಿ ಅವಕಾಶ ಇದೆ ಎಂದಿದ್ದಾರೆ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES