Sunday, September 8, 2024

ಹಣ ನೀಡದ್ದಕ್ಕೆ ಚಾಕು ಇರಿದ ವಿದ್ಯಾರ್ಥಿ

ಧಾರವಾಡ: ಹಣ ನೀಡದ್ದಕ್ಕೆ ಸ್ಫೂರ್ತಿ ಕರಿಯರ್ ಮಾಲೀಕನಿಗೆ ವಿದ್ಯಾರ್ಥಿಯೋರ್ವ ಮನಬಂದಂತೆ ಚಾಕು ಇರಿದು ಪರಾರಿಯಾದ ಘಟನೆ ಧಾರವಾಡದ ಸಪ್ತಾಪೂರದಲ್ಲಿ ನಡೆದಿದೆ.

ಕರಿಯರ್ ಮಾಲೀಕ ರಮೇಶ ಕಾಖಂಡಕಿ ಇರಿತಕೊಳ್ಳಗಾದವರು, ಕಲಬುರಗಿ ಮೂಲದ ಭೀರಪ್ಪ ಎಂಬುವವನಿಂದ ಕೃತ್ಯ. ತಲೆ, ಎದೆ ಭಾಗಕ್ಕೆ ಚೂರಿ ಇರಿದಿರುವ ವಿದ್ಯಾರ್ಥಿ. ಚೂರಿ ಇರಿತದಿಂದ ತೀವ್ರ ರಕ್ತಸ್ರಾವ, ಗಂಭೀರ ಗಾಯಗೊಂಡ ಮಾಲೀಕ. ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕತ್ಸೆ ಪಡೆಯುತ್ತಿರುವ ಮಾಲೀಕ. ಇತ್ತ ಚಾಕು ಇರಿಯುತ್ತಿದ್ದಂತೆ ವಿದ್ಯಾರ್ಥಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಪತ್ನಿ, ಅತ್ತೆ ಮಾವನನ್ನು ಕಬ್ಭಿಣದ ರಾಡ್​ ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಅಳಿಯ

ಕಲಬುರಗಿ ಮೂಲದವನಾದ ಭೀರಪ್ಪ ರಮೇಶ್ ಕಾಖಂಡಕಿ ಮಾಲೀಕತ್ವದ ಸ್ಫೂರ್ತಿ ಕರಿಯರ್ ಸೇರಿದ್ದಾನೆ. ಸೇರುವ ಮೊದಲು 40 ಸಾವಿರ ರೂ. ಹಣ ನೀಡಿದ ಭೀರಪ್ಪ. ಬಳಿಕ ಕೊಟ್ಟಿದ್ದ ಹಣದ ಪೈಕಿ ಎರಡು ಸಾವಿರ ರೂಪಾಯಿ ನೀಡುವಂತೆ ರಮೇಶರನ್ನ ದುಂಬಾಲು ಬಿದ್ದಿದ್ದ ಭೀರಪ್ಪ. ಈ ವೇಳೆ ನಾಳೆ ಬೆಳಗ್ಗೆ ಕೊಡ್ತೇನೆ ಈಗ ದುಡ್ಡಿಲ್ಲ ಎಂದಿದ್ದ ಮಾಲೀಕ. ಅಷ್ಟಕ್ಕೇ ಕೋಪಗೊಂಡು ರಮೇಶ್ ಮೇಲೆ ಏಕಾಏಕಿ ಭಿರಪ್ಪ ಚೂರಿಯಿಂದ ದಾಳಿ ಮಾಡಿ ಪರಾರಿಯಾಗಿದ್ದಾನೆ.

ಸದ್ಯ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಭೀರಪ್ಪನಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES