Sunday, September 8, 2024

ವಿದ್ಯುತ್​ ಅವಘಡ: ಮೂರು ಅಂತಸ್ತಿನ ಬೇಕರಿ ಬೆಂಕಿಗಾಹುತಿ!

ಮಂಡ್ಯ: ವಿದ್ಯೂತ್​ ಶಾರ್ಟ್​ ಸರ್ಕ್ಯೂಟ್​ನಿಂದ ಮೂರು ಅಂತಸ್ತಿನ ಬೇಕರಿ ಬೆಂಕಿಗೆ ಆಹುತಿಯಾಗಿರುವ ಘಟನೆ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.

ಹರ್ಷ ಎಂಬುವವರಿಗೆ ಸೇರಿದ ವೈಷ್ಣವಿ ಅಯ್ಯಂಗಾರ್​ ಬೇಕರಿಯಲ್ಲಿ ವಿದ್ಯುತ್​ ಅವಘಡ ಸಂಭವಿಸಿ ಬೇಕರಿಯಲ್ಲಿದ್ದ ಸುಮಾರು 50 ಲಕ್ಷ ಮೌಲ್ಯದ ವಸ್ತುಗಳು, ಮಿಷನರಿಗಳು ಸುಟ್ಟು ಕರಕಲಾಗಿದೆ.

ಇದನ್ನೂ ಓದಿ: ಮುಂದಿನ 5 ದಿನ ರಾಜ್ಯದಲ್ಲಿ ವರುಣಾರ್ಭಟ ಫಿಕ್ಸ್

ಇಂದು ಬೆಳಿಗ್ಗೆ ಎಂದಿನಂತೆ ಬೇಕರಿ ತೆಗೆಯಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಅಷ್ಟೊತ್ತಿಗಾಗಲೇ ಬೇಕರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ಕರೆಮಾಡಿದ್ದು ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಮಧ್ಯರಾತ್ರಿಯೆ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ಸಂಬಂಧ ಮಳವಳ್ಳಿ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES