Sunday, September 8, 2024

ಪುರಸಭೆ ಸದಸ್ಯನ ಬರ್ಬರ ಹತ್ಯೆ: ಬೆಚ್ಚಿಬಿದ್ದ ಜನ

ಬೆಂಗಳೂರು: ಆನೇಕಲ್​ ಪುರಸಭೆ ಸದಸ್ಯನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ರವಿ ಅಲಿಯಾಸ್ ಸ್ಕ್ರಾಪ್ ರವಿ, ಕೊಲೆಯಾದ ವ್ಯಕ್ತಿ. ಮೃತನು ಆನೇಕಲ್​ ನ ಪುರಸಭೆ ಸದಸ್ಯನಾಗಿದ್ದ. ಹಳೇ ವೈಷಮ್ಯ ಹಿನ್ನೆಲೆ ದುಷ್ಕರ್ಮಿಗಳು ಸಿಕ್ಕ ಸಿಕ್ಕ ಕಡೆಗಳಲ್ಲಿ ಚುಚ್ಚಿ ಮಚ್ಚು ಬೀಸಿ ಆನೇಕಲ್ ನಗರದ ಹೊಸೂರು ಮುಖ್ಯರಸ್ತೆಯ ಬಹದ್ದೂರುಪುರದ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದುಷ್ಕರ್ಮಿಗಳು ಹತ್ಯೆ ನಡೆಸಿದ ದೃಶ್ಯಗಳು ಮೃತ ರವಿ ಮನೆಗೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಸರಿಯಾಗಿ ತೀರ್ಪು ಕೊಟ್ಟಿಲ್ಲ ಎಂದು ಗರಂ ಆದ ಯುವಕರು: ಮಾರಕಾಸ್ತ್ರ ಹಿಡಿದು ದಾಂಧಲೆ

ಇನ್ನು ಮೃತ ರವಿ, ಆನೇಕಲ್ ಪುರಸಭೆ 22ನೇ ವಾರ್ಡ್‌ ಬಹದ್ದೂರ್ ಪುರದ ಸದಸ್ಯನಾಗಿದ್ದ. ಇದೀಗ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿರುವ ರವಿ ಮೃತದೇಹ ಇಡಲಾಗಿದೆ. ಆಸ್ಪತ್ರೆ ಬಳಿ ಕುಟುಂಬಸ್ಥರು ಹಾಗೂ ಆಪ್ತರು ಜಮಾಯಿಸಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆಯಿಂದ ಆಸ್ಪತ್ರೆ ಬಳಿ ಪೊಲೀಸ್ ಬಂದೋಬಸ್ತ್‌ ನಿಯೋಜಿಸಲಾಗಿದೆ.

ಈ ಕುರಿತು ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RELATED ARTICLES

Related Articles

TRENDING ARTICLES