Sunday, September 8, 2024

ರಾಮನಗರ ಜಿಲ್ಲೆ ಹೆಸರು ಬದಲಾವಣೆಯಿಂದ ಜನರಿಗೆ ಸಾಕಷ್ಟು ತೊಂದರೆಯಾಗಲಿದೆ: ನಿಖಿಲ್​ ಕುಮಾರಸ್ವಾಮಿ

ರಾಮನಗರ: ರಾಮನಗರ ಹೆಸರು ಬದಲಾವಣೆ ವಿರೋಧಿಸಿ ಜೆಡಿಎಸ್​ನ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಾದಯಾತ್ರೆ ಹೋರಾಟ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ನಡುವೆ ಹೆಸರು ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಸುದ್ದಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಮನಗರ ಜಿಲ್ಲೆಯ ಹೆಸರು ಬದಲಾವಣೆಯಿಂದ ಜಿಲ್ಲೆಯ ಜನರಿಗೆ ಬಹಳಷ್ಟು ತಾಂತ್ರಿಕ ಸಮಸ್ಯೆಗಳು ಎದುರಾಗಲಿವೆ ಎಂದು ಆರೋಪಿಸಿದರು.

ಇದನ್ನೂ ಓದಿ: ಮತ್ತೆ ಜಿಲ್ಲೆ ಹೆಸರು ಬದಲಾವಣೆ ಮಾಡೋಕೆ ಹೆಚ್ಡಿಕೆ ಹಣೆಲೂ ಬರೆದಿಲ್ಲ: ಡಿ.ಕೆ ಶಿವಕುಮಾರ್

ರಾಮನಗರ ಇತಿಹಾಸವನ್ನು ಅಳಿಸುವ ಪ್ರಯತ್ನ ನಡೆಯುತ್ತಿದೆ, ರಾಮನಗರ ಅಂದಾಗ ರಾಮನ ಪಾದಸ್ಪರ್ಶದ ಪುಣ್ಯಕ್ಷೇತ್ರ ನೆನಪಾಗುತ್ತದೆ. ಆದರೆ ಇದೀಗ ರಾಜಕೀಯ ಉದ್ದೇಶಕ್ಕೆ ಹೆಸರು ಬದಲಾವಣೆ ಮಾಡಲಾಗ್ತಿದೆ. ರಾಮನಗರ ಜಿಲ್ಲೆ ಸ್ಥಾಪನೆ ಆದಾಗ ಯಾರೂ ಕೂಡ ಇದಕ್ಕೆ ಚಕಾರ ಎತ್ತಲಿಲ್ಲ. ರಾಮನಗರ ಹೆಸರಿಗೆ ಯಾರೂ ವಿರೋಧ ಮಾಡಲಿಲ್ಲ. ಆದರೆ ಇವತ್ತು ಬ್ರಾಂಡ್ ಬೆಂಗಳೂರು ಹೆಸರಲ್ಲಿ ರಾಮನಗರ ಇತಿಹಾಸ ಅಳಿಸುವ ಕೆಲಸ ಆಗ್ತಿದೆ. ಇದಕ್ಕೆ ರಾಮನಗರದ ಜಿಲ್ಲೆಯ ಜನತೆಯು ಕೂಡ ವಿರೋಧವಿದೆ ಎಂದು ತಿಳಿಸಿದರು.
ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಆದರೆ ಸ್ಥಳೀಯ ಜನರಿಗೆ ಸಾಕಷ್ಟು ಸಮಸ್ಯೆ ಆಗಲಿದೆ. ಆಧಾರ್ ಕಾರ್ಡ್, ರೇಷನ್ ಕಾರ್ಡ್, ರೆವೆನ್ಯೂ ದಾಖಲಾತಿ ಎಲ್ಲವನ್ನೂ ಬದಲಾವಣೆ ಮಾಡಬೇಕು. ಸಾಕಷ್ಟು ಟೆಕ್ನಿಕಲ್ ಸಮಸ್ಯೆಗಳು ಎದುರಾಗುತ್ತವೆ. ಜನತೆ ನಿತ್ಯ ತಾಲೂಕು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಎದುರಾಗುತ್ತೆ.
ಈ ಎಲ್ಲ ತೊಂದರೆಗಳು ಬರಬಾರದೆಂದರೆ ರಾಮನಗರ ಜಿಲ್ಲೆಯ ಹೆಸರು ಬದಲಾಗಬಾರದು. ಹೀಗಾಗಿ ಈ ಬಗ್ಗೆ ದೊಡ್ಡಮಟ್ಟದ ಹೋರಾಟಕ್ಕೆ ಕೇಂದ್ರ ಸಚಿವರಾದ ಹೆಚ್​.ಡಿ ಕುಮಾರಸ್ವಾಮಿ ಮತ್ತು ಕಾರ್ಯಕರ್ತರೊಂದಿಗೆ ಅವರ ಜೊತೆ ಚರ್ಚೆ ಮಾಡ್ತಿದ್ದೇವೆ ಎಂದರು.

RELATED ARTICLES

Related Articles

TRENDING ARTICLES