Thursday, September 19, 2024

ನನ್ನನ್ನು ಬಂಧಿಸಿದರೇ ‘ಡಿಬಾಸ್’​ ಸೆಲ್​ ಪಕ್ಕದಲ್ಲೇ ಹಾಕಿ: ಯುವಕನ ವೀಡಿಯೋ ವೈರಲ್​

ಚಿತ್ರದುರ್ಗ: ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹರಿಬಿಟ್ಟು ಬೆದರಿಕೆ ಹಾಕಿದ್ದು ಅಕಸ್ಮಾತ್ ನನ್ನನ್ನು ಬಂಧಿಸಿದರೆ ಡಿಬಾಸ್ ದರ್ಶನ್ ಪಕ್ಕದ ಸೆಲ್​ಗೆ ಹಾಕಿ ಎಂದು ಹೇಳಿದ್ದಾನೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದ ಗಾಂಧಿನಗರದ ಪೃಥ್ವಿರಾಜ್ ಎಂಬ ಯುವಕನ ಈ ವಿಡಿಯೋ ಸದ್ಯ ಭಾರೀ ವೈರಲ್ ಆಗುತ್ತಿದೆ. ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಪೃಥ್ವಿರಾಜ್, ಮನೆಗ ಬಾರದ್ದರಿಮದ ಪೃಥ್ವಿರಾಜ್​ ತಾಯಿ 4 ದಿನದ ಹಿಂದೆ ಚಳ್ಳಕೆರೆ ಠಾಣೆಗೆ ಹೋಗಿ ನನ್ನ ಪುತ್ರ ಪೃಥ್ವಿರಾಜ್ ನಾಪತ್ತೆ ಆಗಿದ್ದಾನೆ, ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ದೂರು ನೀಡಿದ್ದರು. ಆದರೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದ ಪೊಲೀಸರು ದೂರು ಸ್ವೀಕರಿಸದೆ ವಾಪಸ್ ಕಳಿಸಿದ್ದರು.

ಇದನ್ನೂ ಓದಿ: KAS ಅಧಿಕಾರಿ ಹಣೆಗೆ ಕುಂಕುಮ ಇಟ್ಟ ಕಾಂಗ್ರೆಸ್​ ಸಂಸದ: ಭಾರೀ ಚರ್ಚೆಗೆ ಗ್ರಾಸವಾಯ್ತು ಸುನೀಲ್ ಬೋಸ್ ನಡೆ

ಮತ್ತೆ ಮನೆಗೆವಾಪಾಸ್ ಆದಮೇಲೆ ತಾಯಿ ಮಗನ ಬಳಿ ಠಾಣೆಯಲ್ಲಿ ನಡೆದ ಸಂಗತಿ ತಿಳಿಸಿದ್ದಾಳೆ. ಇದಕ್ಕೆ ಕೆಂಡಾಮಂಡಲನಾದ ಯುವಕ ಠಾಣೆಗೆ ತೆರಳಿ ನನ್ನ ತಾಯಿ ದೂರು ನಿಡಲು ಬಂದರೂ ಯಾಕೆ ಸ್ವೀಕರಿಸಿಲ್ಲ ಎಂದು ಪ್ರಶ್ನಿಸಿ ವೀಡಿಯೋ ಮಾಡಿದ್ದಾನೆ. ಆಗ ಪೊಲೀಸರು ಬೈದು ಕಳಿಸಿದ್ದಾರೆ. ಇನ್ನು ಇಷ್ಟೆಲ್ಲಾ ಆದ ಬಳಿಕ ಪೃಥ್ವಿರಾಜ್, ಪೊಲೀಸ್ ಠಾಣೆಯಿಂದ ಮತ್ತೊಂದು ವಿಡಿಯೋ ಮಾಡಿದ್ದಾನೆ. ನಾವು ಪೊಲೀಸರಿಗೆ ಪ್ರಶ್ನೆ ಮಾಡಿದ್ದಕ್ಕೆ ಪೊಲೀಸರು ನನಗೆ ನಾಯಿಗೆ ಹೊಡೆದಂತೆ ಹೊಡೆದಿದ್ದಾರೆ. ನನ್ನ ತಾಯಿಯ ಎದುರೇ ಠಾಣೆಯೊಳಗೆ ಹಿಡಿದೊಯ್ದು ಹಲ್ಲೆ ಮಾಡಿದ್ದಾರೆ. ನಾನು ಎಸ್ಪಿ, ಡಿಸಿ ಬಳಿಗೆ ಹೋಗಿ ನ್ಯಾಯ ಕೇಳುತ್ತೇನೆ. ನ್ಯಾಯ ಸಿಗದಿದ್ದರೆ ಏನು ಮಾಡಬೇಕೆಂದು ಗೊತ್ತಿದೆ.

ಡಿಪ್ಲೊಮಾ ಅನ್ ಕಂಪ್ಲೀಟ್ ಆಗಿದ್ದರೂ ಎಲೆಕ್ಟ್ರಿಕಲ್ ಕೆಲಸ ಗೊತ್ತು. ಬೆಂಗಳೂರಿನ ಮುಖ್ಯ ಕೆಂದ್ರಗಳಿಗೆ ಎಲ್ಲಿಂದ ವಿದ್ಯುತ್ ಕನೆಕ್ಷನ್ ಇದೆ ಗೊತ್ತು. ರಾಜಭವನ, ವಿಧಾನಸೌಧ, ಮೆಟ್ರೋ, ಇಸ್ರೋ, ಡಿಆರ್​ಡಿಓ ಎಲ್ಲಾ ಗೊತ್ತು. ಎಲ್ಲಿ ಏನು ಮಾಡಿದರೆ ಬ್ಲಾಸ್ಟ್ ಆಗುತ್ತದೆಂದು ಗೊತ್ತು. ನ್ಯಾಯ ಸಿಗದಿದ್ದರೆ ನಾನು ಟೆರರಿಸ್ಟ್ ಆಗುತ್ತೇನೆಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೃಥ್ವಿರಾಜ್ ಹರಿಬಿಟ್ಟಿದ್ದಾನೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

RELATED ARTICLES

Related Articles

TRENDING ARTICLES