ಬೆಂಗಳೂರು: ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ, ಉದ್ದೇಶ ಪೂರ್ವಕವಾಗಿ ನೀತಿ ಆಯೋಗದ ಸಭೆಗೆ ಬಾಯ್ಕಾಟ್ ಮಾಡಿದ್ದೇನೆ ಎಂದು ವಿತ್ತ ಸಚಿವೆ ನಿರ್ಮಾಲಾ ಸೀತಾರಾಮನ್ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದಾರೆ.
ಇದನ್ನೂ ಓದಿ: ಭ್ರಷ್ಟಾಚಾರದ ಆರೋಪ: ಸಿಎಂ ವಿರುದ್ದ ಮಾನನಷ್ಟ ಪ್ರಕರಣ ದಾಖಲಿಸುತ್ತೇನೆ- ಕೋಟಾ ಶ್ರೀನಿವಾಸ್
ಮೈಸೂರಿನಲ್ಲಿ ಮಾತನಾಡಿದ ಅವರು ನಾನು ಮಾತ್ರ ಅಲ್ಲ, ಬಿಜೆಪಿಯೇತರ ಸರ್ಕಾರದ ರಾಜ್ಯಗಳು ಬಾಯ್ಕಾಟ್ ಮಾಡಿದ್ದಾರೆ, ರಾಜ್ಯಕ್ಕೆ ನ್ಯಾಯವೇ ಸಿಗದಿದ್ದ ಮೇಲೆ ಸಭೆಗೆ ಹೋಗಿ ಏನು ಪ್ರಯೋಜನ,
ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ, ಪ್ರತಿ ಭಾರಿ ನಿರ್ಮಾಲಾ ಸೀತಾರಾಮನ್ ರಾಜ್ಯಕ್ಕೆ ಬಂದು ಸುಳ್ಳು ಹೇಳಿ ಹೋಗುತ್ತಾರೆ.
ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ, ಕರ್ನಾಟಕದ ಖುಣ ತೀರಿಸಿಬಾರದ, ಕೇಂದ್ರ ಸಚಿವ ಕುಮಾರಸ್ವಾಮಿ ಮಂಡ್ಯದಿಂದ ಆಯ್ಕೆಯಾಗಿದ್ದಾರೆ. ಮಂಡ್ಯ ಕ್ಷೇತ್ರಕ್ಕೆ ಕಾರ್ಖಾನೆ ತಂದಿದ್ದಾರಾ, 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯ ದೇಶದ ಯಾವ ರಾಜ್ಯಕ್ಕೂ ಆಗಿಲ್ಲ, ಅತಿ ಹೆಚ್ಚು ತೆರಿಗೆ ಕೊಡುವುದರಲ್ಲಿ ಕರ್ನಾಟಕ ರಾಜ್ಯಕ್ಕೆ ಎರಡನೇ ಸ್ಥಾನ, ಇಂತಹ ರಾಜ್ಯಕ್ಕೆ ಅನ್ಯಾಯಾಗುತ್ತಿದೆ, ಎಂದು ನಿರ್ಮಾಲಾ ಸೀತಾರಾಮನ್ ವಿರುದ್ದ ವಾಗ್ದಾಳಿ ನಡೆಸಿದಾರೆ.