Friday, September 20, 2024

ಇಂದು ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಹವಾಮಾನ ಇಲಾಖೆ ಮುಂದಿನ ಎರಡು ದಿನಗಳ ಕಾಲ ರಾಷ್ಟ್ರ ರಾಜಧಾನಿ ದೆಹಲಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಗುರುವಾರದವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಂಗಳವಾರ ದೆಹಲಿಯಲ್ಲಿ ಮಧ್ಯಂತರ ಮಳೆಯಾಗಿದೆ. ಗುರುವಾರ, ಶುಕ್ರವಾರ ಮತ್ತು ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಆಷಾಡ ಮುಗಿಸಿ ಮನೆಗೆ ಬಂದ ಅಳಿಯನಿಗೆ ನೂರು ಬಗೆಯ ಖಾದ್ಯ ಉಣಬಡಿಸಿದ ಅತ್ತೆ!

ಇನ್ನು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ತುಮಕೂರಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಯಾದಗಿರಿ, ಕೋಲಾರ, ರಾಯಚೂರು, ಕೊಪ್ಪಳ ಹಾಗೂ ಕಲಬುರಗಿ, ಹಾವೇರಿ, ಗದಗ ಸೇರಿದಂತೆ ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.

RELATED ARTICLES

Related Articles

TRENDING ARTICLES