Thursday, September 19, 2024

ಖಾಸಗಿ ದೂರಿನ ಮೇಲೆ ಸಿಎಂ ಪ್ರಾಸಿಕ್ಯೂಷನ್​ಗೆ ಅನುಮತಿ ಕುತೂಹಲ ಮೂಡಿಸಿದೆ: ಶಾಸಕ SR ವಿಶ್ವನಾಥ್​

ಬೆಂಗಳೂರು: ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರಾದ ಗೆಹ್ಲೋಟ್​ ಅವರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ಕುರಿತು ಯಲಹಂಕ ಶಾಸಕ ಎಸ್​ ಆರ್​ ವಿಶ್ವನಾಥ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಸಿಎಂ ವಿರುದ್ದ ಪ್ರಾಸಿಕ್ಯೂಷನ್​ಗೆ ಅನುಮತಿ: ರಾಜ್ಯಪಾಲರ ವಜಾಕ್ಕೆ ಸಚಿವ ಈಶ್ವರ ಖಂಡ್ರೆ ಒತ್ತಾಯ

ಬೆಂಗಳೂರಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಖಾಸಗಿ ದೂರಿನ ಮೇಲೆ ಪ್ರಾಸಿಕ್ಯೂಷನ್​​ಗೆ ಅನುಮತಿ ಕೊಟ್ಟಿರೋದು ಕುತೂಹಲ ಮೂಡಿಸಿದೆ. ನಮ್ಮ ಹೋರಾಟ ಕೂಡ ಅದೇ ಆಗಿತ್ತು ಎಂದರು.

ಸಿಎಂ ಏನ್ ತೀರ್ಮಾನ ಮಾಡ್ತಾರೋ ಗೊತ್ತಿಲ್ಲ. ನಮ್ಮ ಪಕ್ಷದ ಒತ್ತಾಯ ಇದ್ದಿದ್ದು ಸಿಎಂ ರಾಜೀನಾಮೆ ಕೊಡಬೇಕು ಅಂತಾ. ನಮ್ಮ‌ ಮುಖಂಡರು ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡ್ತಾರೆ.
ಸರ್ಕಾರ ಕೂಡ ಸುಮ್ಮನೆ ಇರಲ್ಲ. ಸಿಎಂಗೆ ನೈತಿಕತೆ ಪ್ರಶ್ನೆ ಎದುರಾಗಿದೆ. ಪ್ರತಿಪಕ್ಷವಾಗಿ ನಾವು ಸಿಎಂ ರಾಜೀನಾಮೆ ಕೇಳ್ತೀವಿ ಅಂತಾ ಹೇಳಿದ್ದಾರೆ.

RELATED ARTICLES

Related Articles

TRENDING ARTICLES