Tuesday, September 17, 2024

ನನ್ನ ತಂದೆ ಯಾವುದೇ ತಪ್ಪು ಮಾಡಿಲ್ಲ ಅದಕ್ಕೆ ಎದೆಗುಂದಿಲ್ಲ: ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಬಿಜೆಪಿಯವರು ಯಾವ ಆಧಾರದ ಮೇಲೆ ಸಿಎಂ ರಾಜೀನಾಮೆ ಕೇಳುತ್ತಿದ್ದಾರೆ ಗೊತ್ತಿಲ್ಲ ಎಂದು ಡಾ ಯತೀಂದ್ರ ಸಿದ್ದರಾಮಯ್ಯ, ತಂದೆ ಪರ ಬೆಂಬಲ ಸೂಚಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಇದು ಟಾರ್ಗೆಟ್ ಸಿದ್ದರಾಮಯ್ಯ ಹಾಗೂ ಟಾರ್ಗೆಟ್ ಕಾಂಗ್ರೆಸ್. ಸಿದ್ದರಾಮಯ್ಯರನ್ನು ರಾಜಕೀಯವಾಗಿ ಮುಗಿಸಿದರೆ ಕಾಂಗ್ರೆಸ್ ಶಕ್ತಿ ಕುಂದುತ್ತದೆ ಎಂಬುದು ಬಿಜೆಪಿಗೆ ಗೊತ್ತಿದೆ, ಇದೇ ಕಾರಣಕ್ಕೆ ಈ ಷಡ್ಯಂತರ ಮಾಡಲಾಗುತ್ತಿದೆ.

ಇದನ್ನೂ ಓದಿ: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್​​

ನನ್ನ ತಂದೆ ಯಾವ ತಪ್ಪು ಮಾಡಿಲ್ಲ ಆದ್ದರಿಂದ ಎದೆಗುಂದಿಲ್ಲ. ನಮ್ಮ ತಂದೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಎಲ್ಲರ ಮೇಲೂ ರಾಜ್ಯಪಾಲರ ದುರ್ಬಳಕೆ ಮಾಡಿಕೊಂಡು ಸುಳ್ಳು ಕೇಸು ಹಾಕಿದರೆ ಏನು ಮಾಡುವುದು? ನಮಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದು ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES