Thursday, September 12, 2024

ಫುಟ್ಬಾಲ್ ಆಟದಲ್ಲಿ ಕಿರಿಕ್​, ವಿದ್ಯಾರ್ಥಿಗಳ ಮೇಲೆ ಹಲ್ಲೆ

ಮಂಗಳೂರು: ಫುಟ್ಬಾಲ್ ಆಟದಲ್ಲಿ ಕಿರಿಕ್​ ಮಾಡಿಕೊಂಡು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಮಹಾಕಾಳಿ ಪಡ್ಪು ಮತ್ತು ಪಡೀಲ್ ನಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಮಂಗಳೂರಿನ ಪ್ರತಿಷ್ಟಿತ ಅಲೋಶಿಯಸ್ ಹಾಗೂ ಯೆನಪೋಯ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜನ್ಮದ್ ಎಂಬ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ದಿಯಾನ್, ಅನ್ನೈ, ತಸ್ಮಿನ್, ಸಲ್ಮಾನ್, ಅನಾಸ್ ಹಲ್ಲೆಗೈದ ಆರೋಪಿಗಳು.

ಇದನ್ನೂ ಓದಿ: ಬೆತ್ತಲೆ ಮಾಡಿ ಯುವಕನಿಗೆ ಇಂಜೆಕ್ಷನ್​ ಕೊಟ್ಟು ಲಿಂಗ ಪರಿವರ್ತನೆ!

ನಗರದ ಎರಡು ಪ್ರತ್ಯೇಕ ಸ್ಥಳಗಳಿಗೆ ಕರೆದೊಯ್ದು ವಿದ್ಯಾರ್ಥಿಗಳಿಗೆ ಮನಸೋ ಇಚ್ಚೆ ಹೊಡೆದು ಸಿಗರೇಟ್ ನಿಂದ ಸುಟ್ಟು ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಾಲಾಗುತ್ತಿದೆ.

ಈ ಪೈಕಿ ಹಲ್ಲೆ ಮಾಡಿದ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದು, ನಾಲ್ವರಿಗೆ ಶೋಧ ನಡೆಸಿದ್ದಾರೆ. ತನಿಖೆ ವೇಳೆ ಬಟ್ಟೆ ಬಿಚ್ಚಿಸಿ ಕ್ಷಮೆ ಕೇಳಿ ಬಸ್ಕಿ ಹೊಡೆಸಿದ್ದ ನೀಜ ಕೃತ್ಯದ ವಿಡಿಯೋ ಪೊಲೀಸರು ಕೈಸೇರಿದೆ.

RELATED ARTICLES

Related Articles

TRENDING ARTICLES