ವಿಜಯನಗರ: ತುಂಗಭದ್ರಾ ಜಲಾಶಯ 19ನೇ ಕ್ರಸ್ಟ್ ಗೇಟ್ ಕಟ್ ಆಗಿ ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ನದಿ ಪಾತ್ರದಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಸದ್ಯ ವಾಪಸ್ ಪಡೆಯಲಾಗಿದೆ.
ಇದನ್ನೂ ಓದಿ: ಮಲಯಾಳಂ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಮಾಫಿಯಾ
ಕ್ರಸ್ಟ್ ಗೇಟ್ ದುರಸ್ತಿ ವೇಳೆ ಕಾನೂನು ಸುರಕ್ಷತೆ ಹಾಗೂ ಸಾರ್ವಜನಿಕ ಸುರಕ್ಷತೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಗೇಟ್ ಕುಸಿತದ ಸುದ್ದಿ ಹರಡಿದಾಗ ಜನರು ದೊಡ್ಡ ಸಂಖ್ಯೆಯಲ್ಲಿ ವೀಕ್ಷಣೆಗೆ ಬರಬಹುದು ಹಾಗೂ ಅದರಿಂದ ಅಪಾಯ ಉಂಟಾಗಬಹುದು ಎಂಬ ಅನುಮಾನದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.
ಜಲಾಶಯ ಸುತ್ತಮುತ್ತಲಿನ ಕಾಲುವೆಗಳು, ಡ್ಯಾಂ ವೀಕ್ಷಣೆಗೆ ಆ.12ರಿಂದ ನಿರ್ಬಂಧ ಹೇರಿ ಆದೇಶಿಸಿದ್ದ ವಿಜಯನಗರ ಜಿಲ್ಲಾಡಳಿತ ಗೇಟ್ ದುರಸ್ತಿ ಆದ ಹಿನ್ನೆಲೆಯಲ್ಲಿ ಆದೇಶ ವಾಪಸ್ ಪಡೆದುಕೊಂಡಿದೆ. ಇದೀಗ ನಿರ್ಬಂಧ ಆದೇಶ ತೆರವುಗೊಳಿಸಿ ಪ್ರವಾಸಿಗರ ಪ್ರವೇಶಕ್ಕೆ ಮುಕ್ತಗೊಳಿಸಿದೆ.