Tuesday, September 17, 2024

HDK ವಿರುದ್ದ ಪ್ರಾಸಿಕ್ಯೂಷನ್: ರಾಜ್ಯಪಾಲರ ಪಕ್ಷಪಾತ ನೇರವಾಗಿ ತೋರಿಸುತ್ತದೆ- ದಿನೇಶ್ ಗುಂಡೂರಾವ್

ಹೆಚ್,ಡಿ,ಕೆ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತವು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೆ,ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಕರಣ ಬೇರೆ, ಈಗಾಗಲೇ ತನಿಖೆ ಮಾಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಿ ಅಂತ ಲೋಕಾಯುಕ್ತ ಕೇಳಿದ್ದಾರೆ. ಆದರೆ, ಇಲ್ಲಿಯವರೆಗೂ ಯಾವುದೇ ಅನುಮತಿ ಕೊಟ್ಟಿಲ್ಲ. ಇದೀಗ ಮತ್ತೆ ತಡ ಆಗ್ತಾ ಇದೆ ಅಂತ ಮತ್ತೊಮ್ಮೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಈ ಪ್ರಕರಣ ಲೋಕಾಯುಕ್ತದಲ್ಲಿ ಸಾಬೀತಾಗಿದೆ, ಹಾಗಾಗಿಯೇ ಮನವಿ ಪತ್ರವನ್ನು ಕೊಟ್ಟಿದ್ದಾರೆ.

ಇನ್ನು ಅದರ ಬಗ್ಗೆ ರಾಜ್ಯಪಾಲರು ಯಾವುದೇ ಕ್ರಮ ವಹಿಸಿಲ್ಲ, ಇದೊಂದು ಅಕ್ಷ್ಯಮ್ಯ ಅಪರಾಧ. ಇದು ಪಕ್ಷಪಾತವನ್ನು ನೇರವಾಗಿ ತೋರಿಸುತ್ತದೆ ಎಂದು ದಿನೇಶ್‌ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮಲಯಾಳಂ ಚಿತ್ರರಂಗದಲ್ಲಿ ಕಾಸ್ಟಿಂಗ್‌ ಕೌಚ್ ಮಾಫಿಯಾ

H.D. ಕುಮಾರಸ್ವಾಮಿ ಪ್ರಾಸಿಕ್ಯೂಷನ್​​ಗೆ ಅನುಮತಿ ಕೇಳಿದ SIT:

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್ ಡಿ.ಕುಮಾರಸ್ವಾಮಿ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಕೋರಿ SIT ಮನವಿ ಸಲ್ಲಿಸಿದೆ.

2007ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಂಡೂರು ಪ್ರದೇಶದಲ್ಲಿ ಎಸ್ ಎಸ್ ವಿಎಂ ಕಂಪನಿಗೆ ಅಕ್ರಮವಾಗಿ ಗಣಿಗಾರಿಕೆ ಮಂಜೂರು ಮಾಡಿದ್ದರು. ಗಣಿ ಮತ್ತು ಖನಿಜ ನಿಯಮ ಉಲ್ಲಂಘಿಸಿ 550 ಎಕರೆ ಗಣಿ ಗುತ್ತಿಗೆ ನೀಡಲಾಗಿತ್ತು. ಈ ಸಂಬಂಧ ತನಿಖೆ ನಡೆಸಿದ್ದ ಅಂದಿನ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ವರದಿಯನ್ನೂ ಸಲ್ಲಿಸಿದ್ದರು.

ಲೋಕಾಯುಕ್ತರ ವರದಿ ಆದರಿಸಿ SIT ತನಿಖೆ ನಡೆಸಿ ವರದಿಯನ್ನೂ ಸಲ್ಲಿಸಿತ್ತು. ಈ ಸಂಬಂಧ ಕಳೆದ ಜುಲೈ 20ರಂದು ರಾಜ್ಯಪಾಲರು ಕೇಳಿದ್ದ ಕೆಲವು ಪ್ರಶ್ನೆಗಳಿಗೆ SIT ಆಗಸ್ಟ್​ 8ರಂದು ಸಮರ್ಪಕ ಉತ್ತರವನ್ನೂ ನೀಡಿತ್ತು. ಇದೀಗ HD ಕುಮಾರಸ್ವಾಮಿ ವಿರುದ್ದ ಆರೋಪ ಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ IGP M ಚಂದ್ರಶೇಖರ್ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ಪ್ರಕರಣದ ಬಗ್ಗೆ ಪವರ್ ಟಿವಿಯಲ್ಲಿ ವಿಸ್ತೃತ ವರದಿ ಪ್ರಸಾರವಾಗಿತ್ತು.

RELATED ARTICLES

Related Articles

TRENDING ARTICLES