ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಆರ್ಎಸ್ಎಸ್ ಹಾಗೂ ಬಿಜೆಪಿ ಸಭೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಸ್ವಪಕ್ಷದ ಸದಸ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮೈಸೂರು ಲೋಕಸಭೆ ಟಿಕೆಟ್ ಕೈತಪ್ಪಿದ್ದ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಪರೋಕ್ಷವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ ಹೊರಹಾಕಿದ್ದಾರೆ.
ಬಿಜೆಪಿ ಪ್ರತಿಭಟನೆ ಪ್ರಾಣಿಹಿಂಸೆ ವಿರುದ್ಧ ಕಟುಕರ ಪ್ರತಿಭಟನೆಯಂತೆ; ಸಿಎಂ
ಪಕ್ಷದಲ್ಲಿ ನಡೆಯುತ್ತಿರುವ ಕೆಲ ವಿಚಾರಗಳ ಬಗ್ಗೆ ಪ್ರಶ್ನೆ ಮಾಡಿದರೆ ನಮ್ಮನ್ನೇ ಬೇರೆ ರೀತಿಯಾಗಿ ನೋಡೋದು ಏಕೆ. ಪಕ್ಷ ಮುನ್ನಡೆಸೋರು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಬೇಕೇ ಹೊರತು, ಹಿತ್ತಾಳೆ ಕಿವಿ ಹೊಂದಿರಬಾರದು ಎಂದು ಪರೋಕ್ಷವಾಗಿ ವಿಜಯೇಂದ್ರ ನಾಯಕತ್ವದ ಬಗ್ಗೆಯೂ ಪ್ರತಾಪ್ ಸಿಂಹ ಆಕ್ಷೇಪ ವ್ಯಕ್ತಪಡಿಸಿದರು.
ಹಿಂದುತ್ವ ಸಿದ್ಧಾಂತ ಪರ ಸಮರ್ಥನೆ ಮಾಡಿಕೊಂಡಿದ್ದೇ ತಪ್ಪಾಯ್ತಾ. ಟಿಕೆಟ್ ಕೊಡದಿರುವುದಕ್ಕೆ ಕಾರಣವೇ ಇಲ್ಲ, ಆದರೂ ಟಿಕೆಟ್ ಕೈತಪ್ಪಿಸಲಾಯಿತು. ಪಕ್ಷದ ಕೆಲ ಹಿಂದುತ್ವ ಸಮರ್ಥಕರಿಗೂ ಟಿಕೆಟ್ ಕೊಟ್ಟಿಲ್ಲ. ನಾವ್ಯಾರೂ ಹೊಂದಾಣಿಕೆ ಮಾಡಿಕೊಳ್ಳುವವರಲ್ಲ ಅಂತಾ ಟಿಕೆಟ್ ಕೊಡಲಿಲ್ಲವೇ ಎಂದು ಆಕ್ರೋಶ ಹೊರಹಾಕಿದರು.