Saturday, September 21, 2024

ನಾಗಮಂಗಲ ಗಲಭೆ ಪ್ರಕರಣ; ಕಾನೂನು ಪ್ರಕಾರವೇ ಎಫ್​​​ಐಆರ್​: ಪರಮೇಶ್ವರ್​

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೋಮು ಗಲಭೆ ಸಂಬಂಧ ದಾಖಲಾದ ಎಫ್​ಐಆರ್​​​​ ಕುರಿತು ಕೇಂದ್ರ ಸಚಿವ ಹೆಚ್​​.ಡಿ.ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್​​ ಕಿಡಿಕಾರಿದ್ದಾರೆ.

ಗಮನಿಸಿ: ತಿಹಾರ್​​​ ಜೈಲಿನಿಂದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​​ ಬಿಡುಗಡೆ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾನೂನು ಪ್ರಕಾರ ಏನು ಮಾಡಬೇಕೋ ಅದನ್ನ ಮಾಡುತ್ತಾರೆ. ನಾವು ಹೇಳಿದ ಹಾಗೆ ಮಾಡಲು ಆಗುವುದಿಲ್ಲ ಎಂದರು.

ನಾಗಮಂಗಲ ಸದ್ಯಕ್ಕೆ ಶಾಂತಿಯುತವಾಗಿದೆ. ಅಲ್ಲಿ ಶಾಂತಿ ಸಭೆ ನಡೆಸಲು ಸೂಚನೆ ಕೊಟ್ಟಿದ್ದೇನೆ ಎಂದು ತಿಳಿಸಿದರು. ಮತ್ತೆ ಯಾವುದೇ ಅಹಿತಕರ ಘಟನೆ ಆಗಬಾರದು ಅಂತ ಸೂಚನೆ ಕೊಟ್ಟಿದ್ದೇನೆ. ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ ಎಂದರು.

RELATED ARTICLES

Related Articles

TRENDING ARTICLES