Sunday, October 6, 2024

ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ವಿರುಧ್ದ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರ್​ಸ್ವಾಮಿ

ರಾಮನಗರ : ನಗರದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ 2019ರ ಲೋಕಸಭಾ ಚುನಾವಣೆ ಒಂದು ಕಹಿ ಘಟನೆಯಾಗಿತ್ತು ಈ ಘಟನೆ ಮರೆಯಲು ಮತ್ತೊಮ್ಮೆ ಮಂಡ್ಯದಲ್ಲಿ ಜೆಡಿಎಸ್ ಬಾವುಟ ಹಾರಬೇಕು ಎಂಬ ಆಸೆ ಇತ್ತು. ಅದೇ ರೀತಿ ಮಂಡ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಿತು. ಮಂಡ್ಯದ ಕಾರ್ಯಕರ್ತರು, ಮುಖಂಡರು ಕುಮಾರಣ್ಣ ಅವರ ಮೇಲೆ ಸಾಕಷ್ಟು ಒತ್ತಡ ಹೇರಿದ್ರು. ಹಾಗಾಗಿ ಕುಮಾರಣ್ಣ ಅವ್ರು ಮಂಡ್ಯದಲ್ಲಿ ಸ್ಪರ್ಧೆ ಮಾಡಬೇಕಾದ ಅನಿವಾರ್ಯ ಬಂತು. ಎಂದು ಹೇಳಿದರು.

ಮಂಡ್ಯದಲ್ಲಿ ಗೆದ್ದ ಬಳಿಕ ಕುಮಾರಣ್ಣ ಮೋದಿಯವರ ಸಂಪುಟದಲ್ಲಿ ಕೆಲಸ ಮಾಡ್ತಿದ್ದಾರೆ. ಮಂಡ್ಯದ ಜಿಲ್ಲೆಯ ಜನರ ಆಶಿರ್ವಾದದಿಂದ ಕೇಂದ್ರ ಕೈಗಾರಿಕಾ ಸಚಿವರಾಗಿದ್ದಾರೆ. ರಾಜ್ಯದಲ್ಲಿ ಮತ್ತು ದೇಶದಲ್ಲಿ ಸಾಕಷ್ಟು ಯುವಜನತೆ ವಿದ್ಯಾವಂತರಿದ್ದಾರೆ. ಅವರಿಗೆ ಸಮರ್ಪಕ ಉದ್ಯೋಗಾವಕಾಶಗಳಿಲ್ಲ. ಇದೆಲ್ಲವನ್ನೂ ಕುಮಾರಸ್ವಾಮಿ ಅವರು‌ ಮನಸ್ಸಿಗೆ ತೆಗೆದುಕೊಂಡು ಕಾರ್ಯೋನ್ಮುಖರಾಗಿದ್ದಾರೆ. ಮಂಡ್ಯದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಿದ್ದಾರೆ. ಮಂಡ್ಯದಲ್ಲಿ ಹಲವಾರು ಕೈಗಾರಿಕೆಗಳನ್ನು ಸ್ಥಾಪಿಸಲು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಚನ್ನಪಟ್ಟಣದಲ್ಲಿ ದೇವೇಗೌಡರು ಇಗ್ಗಲೂರು ಡ್ಯಾಂ ನಿರ್ಮಾಣ ಮಾಡಿದ್ದಾರೆ. ಇದು ತಾಲೂಕಿನ ರೈತಾಪಿವರ್ಗಕ್ಕೆ ದೇವೇಗೌಡರು ನೀಡಿರೋ ಕೊಡುಗೆಯಾಗಿದೆ. ಜನರು ಇದನ್ನ ಪ್ರತಿದಿನ ನೆನಪು ಮಾಡಿಕೊಳ್ತಾರೆ ಎಂದು ಚನ್ನಪಟ್ಟಣದ ಕೋಡಂಬಳ್ಳಿ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ.

ಕುಮಾರಣ್ಣ ರಾಜ್ಯದಲ್ಲಿ ಎರಡನೇ ಬಾರಿಗೆ ಸಿಎಂ ಆಗಲು ಚನ್ನಪಟ್ಟಣದ ಜನತೆ ಕಾರಣ. ಚನ್ನಪಟ್ಟಣ ತಾಲೂಕಿಗೆ ಒಂದುವರೆ ಸಾವಿರ ಕೋಟಿ ಅನುದಾನ ತಂದಿದ್ರು. ಇದನ್ನು ಯಾರೂ ತಿರುಚಲು ಸಾಧ್ಯವಿಲ್ಲ. ರಾಜ್ಯದ ಉಪಮುಖ್ಯಮಂತ್ರಿಗಳಿಗೆ ಚನ್ನಪಟ್ಟಣ ತಾಲೂಕು ಗೊತ್ತಿರಲಿಲ್ಲ. ಈಗ ಉಪಚುನಾವಣೆ ಇರೋದ್ರಿಂದ ಚನ್ನಪಟ್ಟಣಕ್ಕೆ ನಿರಂತರ ಪ್ರವಾಸ ಮಾಡ್ತಿದ್ದಾರೆ. ಏನೋ ಅನುದಾನ ತಂದಿದ್ದೀವಿ ಅಂತ ದೊಡ್ಡದೊಡ್ಡ ಫ್ಲೆಕ್ಸ್ ಹಾಕಿಸ್ತಿದ್ದಾರೆ. ಕುಮಾರಸ್ವಾಮಿ ಅವರು ತಾವು ತಂದ 1500ಕೋಟಿ ಅನುದಾನದ ಬಗ್ಗೆ ಜಾಹಿರಾತು ಕೊಟ್ಟಿರಲಿಲ್ಲ. ಪಾಪ ಈಗ ಉಪಮುಖ್ಯಮಂತ್ರಿಗಳಿ ಚನ್ನಪಟ್ಟಣದ ಮೇಲೆ ಮಮಕಾರ ಬಂದಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ. ಶಿವಕುಮಾರ್​ಗೆ ಟಾಂಗ್ ನೀಡಿದರು.

ಮುಂದುವರಿದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ನಿಖಿಲ್ ಕುಮಾರ್​ಸ್ವಾಮಿ. ಕಾಂಗ್ರೆಸ್ ಐದು ಗ್ಯಾರಂಟಿ, ಐದು ಗ್ಯಾರಂಟಿ ಅಂತ ಚರ್ಚೆ ಮಾಡ್ತಿದ್ದಾರೆ. ಅದನ್ನ ಸಮರ್ಪಕವಾಗಿ ಕೊಡ್ತಿದ್ದಾರಾ.? ಗ್ಯಾರಂಟಿ ಹೆಸರಲ್ಲಿ ಸರ್ಕಾರ ಹಗಲು ದರೋಡೆ ಮಾಡ್ತಿದೆ. ರಾಜ್ಯದ ಜನತೆ ಇಂತಹ ಭ್ರಷ್ಟ ಸರ್ಕಾರ ನೋಡಿಲ್ಲ. ಕೇವಲ ಒಂದುವರೆ ವರ್ಷದಲ್ಲಿ ಸರ್ಕಾರ ನಡವಳಿಕೆ ಗೊತ್ತಾಗ್ತಿದೆ. ಪರಿಶಿಷ್ಟ ಜಾತಿ, ಪಂಗಡದ 187ಕೋಟಿ ಹಣವನ್ನ ಬೇರೆ ರಾಜ್ಯದ ಚುನಾವಣೆಗೆ ಬಳಸಿಕೊಂಡಿದೆ. ಇದನ್ನು ಸ್ವತಃ ಸಿಎಂ ಅವರೇ ಇದನ್ನು ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಇದರ ಮಧ್ಯೆ ಪಾಪ ಡಿಸಿಎಂಗೆ ಚನ್ನಪಟ್ಟಣ ನೆನಪಿಗೆ ಬಂದಿದೆ. ಚನ್ನಪಟ್ಟಣ ತಾಲೂಕಿಗೆ ಕಾಂಗ್ರೆಸ್ ಕೊಡುಗೆ ಏನು.? ಇದನ್ನ ನೀವು ಪ್ರಶ್ನೆ ಮಾಡಬೇಕು.ಕೇವಲ ಚುನಾವಣೆ ಗೋಸ್ಕರ ಮಾಡ್ತಿರೋ ದೊಂಬರಾಟ ಇದು ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ.

RELATED ARTICLES

Related Articles

TRENDING ARTICLES