Wednesday, October 9, 2024

ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ : ಮುಸ್ಲಿಂ ಸಮುದಾಯದವರಿಂದ ಪ್ರತಿಭಟನೆ

ಹುಬ್ಬಳ್ಳಿ : ಮಹಮ್ಮದ್ ಪೈಗಂಬರ್ ಕುರಿತಂತೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪಕ್ಕೆ ಪ್ರತಿಯಾಗಿ ಇಂದು ಅಂಜುಮನ್ ಏ ಇಸ್ಲಾಂ ಸಂಸ್ಥೆಯಿಂದ ಹುಬ್ಬಳ್ಳಿಯ ತಹಶೀಲ್ದಾರ್ ಕಛೇರಿಯ ಮುಂದೆ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದರು.

ನರಸಿಂಹ್ಹಾನಂದ ಸ್ವಾಮಿಜಿಯವರ ವಿರುದ್ಧವಾಗಿ ಈ ಪ್ರತಿಭಟನೆ ನಡೆದಿದ್ದು. ಉತ್ತರ ಪ್ರದೇಶದ ಗಾಜಿಯಾಬಾದಿನ ಸ್ವಾಮಿಜಿ ಇವರು ಕೆಲ ದಿನಗಳ ಹಿಂದೆ ಮಹಮ್ಮದ್ ಪೈಗಂಬರ್ ಕುರಿತಂತೆ ಅವಹೇಳನಕಾರಿಯಾಗಿ ಮಾತನಾಡಿ ವಿಡಿಯೋ ಮಾಡಿ ಹರಿಬಿಟ್ಟಿದ್ದರು. ಇವರ ವಿರುದ್ಧವಾಗಿ ಈಗ ಹುಬ್ಬಳ್ಳಿಯಲ್ಲಿ ಅಂಜುಮನ್ ಏ ಇಸ್ಲಾಂ ಸಂಸ್ಥೆ ಪ್ರತಿಭಟನೆ ಮಾಡಿದ್ದಾರೆ.

ಪ್ರತಿಭಟನೆ ಮಾಡಿದ ಮುಸ್ಲಿಂ ಸಮುದಾಯದವರು ಸ್ವಾಮೀಜಿಯನ್ನು ಈ ಕೂಡಲೇ ಬಂಧಿಸಬೇಕು ಎಂದು ಒತ್ತಡ ಹೇರಿ. ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಮಾಡಿದರು. ಮಾಜಿ ಸಚಿವ ಎ ಎಮ್ ಹಿಂಡಸಗೇರಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

 

RELATED ARTICLES

Related Articles

TRENDING ARTICLES