ಚಿಕ್ಕಮಗಳೂರು: ನಗರದಲ್ಲಿ ಭಯಾನಕ ಅಪಘಾತವೊಂದು ನಡೆದಿದ್ದು. ಚಿಕ್ಕಮಗಳೂರು ತಾಲೂಕಿನ ಕವಿಕಲ್ ಗಂಡಿ ಬಳಿ ಘಟನೆ ಘಟಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದ್ದು. ಆಶ್ಚರ್ಯಕರ ರೀತಿಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಮಿಳುನಾಡು ಮೂಲದ ಪ್ರವಾಸಿಗರು ಚಿಕ್ಕಮಗಳೂರಿನ ದತ್ತಪೀಠಕ್ಕೆ ಪ್ರವಾಸಕ್ಕೆ ಬಂದಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಸುಮಾರು 250 ಅಡಿ ಆಳದ ಪ್ರಪಾತಕ್ಕೆ ಉರುಳಿಬಿದ್ದಿದೆ. ಕೆಲಕಾಲ ಪ್ರಪಾತದ ಮರದಲ್ಲಿ ನೇತು ಹಾಕಿಕೊಂಡಿದ್ದ ಕಾರಿನಲ್ಲಿಯೇ ಪ್ರವಾಸಿಗರು ಇದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.