Saturday, August 23, 2025
Google search engine
HomeUncategorizedಭೀಕರ ರಸ್ತೆ ಅಪಘಾತ ಪ್ರಕರಣ : ಲಿಂಗಾಯತ ಸಂಪ್ರಾದಾಯದಂತೆ ನೆರವೇರಿದ ಮೃತರ ಅಂತ್ಯ ಸಂಸ್ಕಾರ !

ಭೀಕರ ರಸ್ತೆ ಅಪಘಾತ ಪ್ರಕರಣ : ಲಿಂಗಾಯತ ಸಂಪ್ರಾದಾಯದಂತೆ ನೆರವೇರಿದ ಮೃತರ ಅಂತ್ಯ ಸಂಸ್ಕಾರ !

ವಿಜಯಪುರ : ನೆಲಮಂಗಲ ಭೀಕರ ಅಪಘಾತದಲ್ಲಿ ಸಾವೀಗೀಡಾಗಿದ್ದ 6 ಜನರ ಮೃತದೇಹಗಳು ಮಹಾರಾಷ್ಟ್ರದ ಸ್ವಗ್ರಾಮಕ್ಕೆ ತಲುಪಿದ್ದು, ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿದೆ.

ಇಂದು (ಡಿ.22) ಬೆಳಿಗ್ಗೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಗ್ರಾಮಕ್ಕೆ ಮೃತದೇಹಗಳು ರವಾನೆಯಾಗಿವೆ. ಮೂರು ಅಂಬುಲೆನ್ಸ್ ಮೂಲಕ ಆರು ಮೃತದೇಹಗಳನ್ನು ಕರೆತರಲಾಗಿದೆ. ಮೃತದೇಹಗಳನ್ನು ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮೃತ ಚಂದ್ರಮ್ ಅವರ ಜಮೀನಿನಲ್ಲಿ ಲಿಂಗಾಯತ ಸಮಾಜದ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು.  ಮೃತದೇಹಗಳಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿದ ಬಳಿಕ ಮೃತ ಚಂದ್ರಾಮ ಸಹೋದರ ಮಲ್ಲಿನಾಥ್​ ಬೆಂಕಿ ಸ್ಪರ್ಶಿಸುವ ಮೂಲಕ ಅಂತ್ಯಕ್ರಿಯೆ ನೆರವೇರಿಸಿದರು.

 

ಮೊರಬಗಿ ಗ್ರಾಮದಲ್ಲಿ ಆವರಿಸಿದ ನೀರವ ಮೌನ !

ಮೃತ ಕುಟುಂಬ ಸದಸ್ಯರನ್ನ ನೆನೆಸಿಕೊಂಡ ಮೊರಬಗಿ ಗ್ರಾಮಸ್ಥರು ಕಣ್ಣೀರಿಟ್ಟಿದ್ದು. ಬಡತನದಲ್ಲಿ ಬೆಳೆದು ದೊಡ್ಡ ಸಾಧನೆ ಮಾಡಿದ್ದ ಚಂದ್ರಾಮ ಏಗಪ್ಪಗೊಳ. ನಮ್ಮೂರಿನ ಹುಡುಗರಿಗೆ ಬೆಂಗಳೂರಿನಲ್ಲಿ ಕರೆದುಕೊಂಡು ಹೋಗಿ ಕೆಲಸ ಕೊಟ್ಟಿದ್ದ ಎಂದು ಗ್ರಾಮಸ್ಥರು ಮೃತ ಚಂದ್ರಾಮ ಏಗಪ್ಪತಗೋಳರನ್ನು ನೆನಪಿಸಿಕೊಂಡಿದ್ದಾರೆ. ನೂರಾರು ಯುವಕರಿಗೆ ಕೆಲಸ ಕೊಟ್ಟಿದ್ದ ಚಂದ್ರಾಮ ಕುಟುಂಬ ಇಡೀ ಗ್ರಾಮಕ್ಕೆ ಒಳ್ಳೆಯ ಕುಟುಂಬವೆಂದು ಚಂದ್ರಾಮನ ಸ್ನೇಹಿತರು ಮೃತರನ್ನು ನೆನಪಿಸಿಕೊಂಡು ಕಣ್ಣೀರಿಟ್ಟಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments