Tuesday, August 26, 2025
Google search engine
HomeUncategorizedಮರಕ್ಕೆ ಕಾರು ಡಿಕ್ಕಿ : ಮೂವರು ಸ್ಥಳದಲ್ಲೆ ಸಾ*ವು !

ಮರಕ್ಕೆ ಕಾರು ಡಿಕ್ಕಿ : ಮೂವರು ಸ್ಥಳದಲ್ಲೆ ಸಾ*ವು !

ವಿಜಯಪುರ : ಮರಕ್ಕೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದ್ದು. ಮೃತರನ್ನು ಆರೋಗ್ಯ ಇಲಾಖೆ ಸಿಬ್ಬಂದಿಗಳೆಂದು ಗುರುತಿಸಲಾಗಿದೆ ಎಂದು ತಿಳಿದು ಬಂದಿದೆ.

ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ಎನ್​ಎಚ್ 50 ರಲ್ಲಿ ಘಟನೆ ನಡೆದಿದ್ದು. ಮೃತರು ಕಾರಿನಲ್ಲಿ ಸೊಲ್ಲಾಪುರಕ್ಕೆ ಹೋಗಿ ವಾಪಾಸ್​ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಕಾರು ಡಿಕ್ಕಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಐವರ ಪೈಕಿ ಮೂವರು ಸಾವನ್ನಪ್ಪಿದ್ದು. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ :ಪ್ರಜ್ಞೆ ತಪ್ಪಿದ ಮರಿಯನ್ನು ಬಾಯಲ್ಲಿ ಕಚ್ಚಿಕೊಂಡು ಪಶು ಆಸ್ಪತ್ರೆಗೆ ಕರೆದೊಯ್ದ ಶ್ವಾನ : ವಿಡಿಯೋ ವೈರಲ್​

ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಬಿಜಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು. ಮೃತರ ಮೃತದೇಹಗಳನ್ನು ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments