ಮಂಡ್ಯ : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮೂರು ದಿನದ ಹಿಂದೆ ಮಂಡ್ಯದ ಪ್ರೇಮ ಎಂಬ ಮಹಿಳೆ ವಿಷದ ಮಾತ್ರಗಳನ್ನು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ತಾಯಿಯನ್ನು ಕಳೆದುಕೊಂಡ ಮಗನೂ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
ಹೌದು.. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಕಳೆದ ಕೆಲ ದಿನಗಳಿಂದ ಸಾಕಷ್ಟು ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ. ಸರ್ಕಾರ ಇದಕ್ಕೆ ಕಡಿವಾಣ ಹಾಕಲು ಸುಗ್ರೀವಾಜ್ಙ ಹೊರಡಿಸುತ್ತೇವೆ ಎಂದು ಕಾಲ ಕಳೆಯುತ್ತಿದೆ. ಇದೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಂಡ್ಯದ ಮಳವಳ್ಳಿಯ ಕೊನ್ನಾಪುರ ಗ್ರಾಮದ ಪ್ರೇಮ ಎಂಬ ಮಹಿಳೆ ಜನವರಿ 29ರಂದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಜಿಲ್ಲಾಸ್ಪತ್ರೆಗೆ ದಾಖಲಿಸಿದರು ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ :ವಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾ*ವು: ವೈದ್ಯರ ನಿರ್ಲಕ್ಷ ಎಂದ ಕುಟುಂಬಸ್ಥರು
ತಾಯಿಯನ್ನು ಕಳೆದುಕೊಂಡು ನೋವಿನಲ್ಲಿದ್ದ ಆಕೆಯ ಮಗ ರಂಜಿತ್(30) ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದ್ದು. ಹಲಗೂರು ಕೆರೆಯಲ್ಲಿ ರಂಜಿತ್ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ತಾಯಿ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು. ಮೈಕ್ರೋ ಫೈನಾನ್ಸ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.