Thursday, February 6, 2025

ನಿರ್ಮಾಣ ಹಂತದ ಕಟ್ಟಡಕ್ಕೆ ಬೆಂಕಿ: ಇಬ್ಬರು ಕಾರ್ಮಿಕರು ಸಾ*ವು

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡಕ್ಕೆ ಬೆಂಕಿ ಬಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯ, ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದ್ದು. ಓರ್ವ ಕಾರ್ಮಿಕನನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ, ಮಾಗಡಿ ರಸ್ತೆಯ, ಸೀಗೆಹಳ್ಳಿ ಗ್ರಾಮದಲ್ಲಿರುವ ಶಿವಾನಿ ಗ್ರೀನ್ಸ್ ಎಂಬ ಲೇಔಟ್​ನಲ್ಲಿ ಘಟನೆ ನಡೆದಿದ್ದು. ಸತೀಶ್​ ಎಂಬವವರಿಗೆ ಸೇರಿದ್ದ ಬಿಲ್ಡಿಂಗ್​ ಬೆಂಕಿಗಾಹುತಿಯಾಗಿದೆ. ಕಟ್ಟಡದ ನಿರ್ಮಾಣ ಕಾರ್ಯ ಬಹುತೇಕ ಮುಗಿದಿದ್ದು. ವುಡ್​ವರ್ಕ್​ ಕಾರ್ಯ ನಡೆಯುತ್ತಿತ್ತು. ಈ ವೇಳೆ ಕೆಲಸಗಾರರು ಬಳಸುತ್ತಿದ್ದ ಸಿಲಿಂಡರ್​ ಸೋರಿಯಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :KSRTC ಬಸ್​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ!

ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಓರ್ವ ಕಾರ್ಮಿಕ ಕಟ್ಟಡದ ಮೇಲಿನ ನೀರಿನ ಟ್ಯಾಂಕ್​ ಮೇಲೆ ಕುಳಿತು ಜೀವ ಉಳಿಸಿಕೊಂಡಿದ್ದಾನೆ. ಆದರೆ ದುರಾದೃಷ್ಟವಶಾತ್​ ಕಟ್ಟಡದೊಳಗೆ ಸಿಲುಕಿದ ಇಬ್ಬರು ಉತ್ತರ ಭಾರತ ಮೂಲದ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ಉತ್ತರ ಪ್ರದೇಶ ಮೂಲದ ಉದಯ್​ ಭಾನು ಮತ್ತು 23 ವರ್ಷದ ರೋಷನ್​ ಎಂದು ಗುರುತಿಸಲಾಗಿದೆ.

RELATED ARTICLES

Related Articles

TRENDING ARTICLES