ಜಮ್ಮು& ಕಾಶ್ಮೀರ: ದೆಹಲಿ ಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು. ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಇದರ ನಡುವೆ ಇಂಡಿ ಒಕ್ಕೂಟದ ಮಿತ್ರಪಕ್ಷ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಮತ್ತು ಜಮ್ಮು ಕಾಶ್ಮೀರ್ದ ಮುಖ್ಯಮಂತ್ರಿ ಒಮರ್ ಅಬ್ದುಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು. ಇಂಡಿ ಒಕ್ಕೂಟದಲ್ಲಿರುವ ಆತಂರಿಕ ಭಿನ್ನಾಭಿಪ್ರಾಯದ ಬಗ್ಗೆ ವ್ಯಂಗ್ಯವಾಡಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮತ್ತು ಭಾರತದ ಮಿತ್ರಪಕ್ಷ ಒಮರ್ ಅಬ್ದುಲ್ಲಾ ಅವರು ಸಾಮಾಜಿಕ ಜಾಲತಾಣ ಎಕ್ಷ್ನಲ್ಲಿ ಆಪ್ ಮತ್ತು ಕಾಂಗ್ರೆಸ್ ನಡುವಿನ ಉದ್ವಿಗ್ನತೆಯನ್ನು ಎತ್ತಿ ತೋರಿಸಿದರು. ಸಂತರೊಬ್ಬರ ಮೀಮ್ ಶೇರ್ ಮಾಡಿರುವ ಒಮರ್ ಅಬ್ದುಲ್ಲಾ “ಔರ್ ಲಾಡೋ ಆಪಾಸ್ ಮೇ!!!” (ನಿಮ್ಮ ನಡುವೆ ಹೋರಾಡುತ್ತಲೇ ಇರಿ) ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಇಂಡಿಯಾ ಒಕ್ಕೂಟದಲ್ಲಿ ನಡೆಯುತ್ತಿರುವ ಆತಂರಿಕ ಕಚ್ಚಾಟದಿಂದ ಮತ್ತೊಬ್ಬರಿಗೆ ಲಾಭವಾಗುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ :ಸರಳವಾಗಿ ಮಗನ ಮದುವೆ ಮಾಡಿ ಕ್ಷಮೆ ಕೇಳಿದ ಗೌತಮ್ ಅದಾನಿ
ದೆಹಲಿ ಚುನಾವಣೆಯಲ್ಲಿ ಮೈತ್ರಿ ಪಕ್ಷವಾಗಿ ಚುನಾವಣೆ ಎದುರಿಸದೆ ಕಾಂಗ್ರೆಸ್ ಮತ್ತು ಎಎಪಿ ಬೇರೆಯಾಗಿ ಸ್ಪರ್ಧೆ ಮಾಡಿದರು. ರಾಹುಲ್ ಗಾಂಧಿ ಕೇಜ್ರಿವಾಲ್ ವಿರುದ್ದ ವಾಗ್ದಾಳಿ ನಡೆಸಿದರೆ. ಮತ್ತೊಂದೆಡೆ ಕೇಜ್ರಿವಾಲ್ ರಾಹುಲ್ ಗಾಂಧಿಗೆ ಟೀಕಾ ಪ್ರಹಾರ ನಡೆಸುತ್ತಿದ್ದರು. ಇವೆಲ್ಲದರಿಂದ ಬಿಜೆಪಿಗೆ ಲಾಭವಾಗಿದ್ದು. ಇವರಿಬ್ಬರ ಕಚ್ಚಾಟದಲ್ಲಿ ಇಂಡಿಯಾ ಕೂಟಕ್ಕೆ ಹಾನಿಯಾಗುತ್ತಿದೆ ಎಂಬ ಅರ್ಥದಲ್ಲಿ ಓಮರ್ ಅಬ್ದುಲ್ಲಾ ಪೋಸ್ಟ್ ಮಾಡಿ ವ್ಯಂಗ್ಯವಾಡಿದ್ದಾರೆ.