Tuesday, February 11, 2025

ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿದ ಮಾಜಿ ಸಚಿವ ಶ್ರೀರಾಮುಲು

ಪ್ರಯಾಗ್​ರಾಜ್​ : ಮಾಜಿ ಸಚಿವ ಶ್ರೀರಾಮುಲು ಪ್ರಯಾಗ್​ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಭೇಟಿ ನೀಡಿದ್ದು. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ.

ಕಳೆದ ಕೆಲದಿನಗಳಿಂದ ರಾಜ್ಯ ರಾಜಕಾರಣದ ಪ್ರಮುಖ ಮುಖವಾಗಿರುವ ಶ್ರೀರಾಮುಲು ಪ್ರಯಾಗ್​ರಾಜ್​ಗೆ ಭೇಟಿ ನೀಡಿದ್ದಾರೆ. ಪತ್ನಿ ಭಾಗ್ಯಲಕ್ಷ್ಮಿ ಜೊತೆ ಕುಂಭಮೇಳದಲ್ಲಿ ಭಾಗಿಯಾಗಿರುವ ಇವರು ಕುಂಭದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಲು ದೆಹಲಿಗೆ ಹೋಗುತಿದ್ದ ಇವರು. ಅಲ್ಲಿ ದೆಹಲಿಗೆ ಯಾವುದೇ ಕರೆ ಬರದ ಹಿನ್ನಲೆ ಪ್ರಯಾಗ್​ನಿಂದ ವಾಪಾಸಾಗಿದ್ದಾರೆ.

ಇದನ್ನೂ ಓದಿ :ಬೆಂಗಳೂರು: ಎರಡು ಕೈಗಳ ಮಧ್ಯ ಮುಗಿಯುವ ರೂಂಗೆ 25 ಸಾವಿರ ಬಾಡಿಗೆ ನೀಡುತ್ತಿದ್ದ ಯುವಕನ ವಿಡಿಯೋ ವೈರಲ್​

ಕಳೆದ ತಿಂಗಳು ಬಿಜೆಪಿ ಪಕ್ಷದ ಸಭೆಯಲ್ಲಿ ಕೋರ್​ ಕಮಿಟಿ ಸದಸ್ಯರಾದ ರಾಧಮೋಹನ್​ ಅಗರ್ವಾಲ್​​ ಅವರು ಸಂಡೂರು ಸೋಲಲು ಶ್ರೀರಾಮುಲು ಕಾರಣ ಎಂದು ಹೇಳಿದ್ದರು. ಇದರಿಂದ ಕುಪಿತರಾಗಿದ್ದ ಶ್ರೀರಾಮುಲು ಬಹಿರಂಗವಾಗಿ ಅಸಮಧಾನ ಹೊರಹಾಕಿದ್ದರು. ಜನಾರ್ಧನ್​​ ರೆಡ್ಡಿಯವರು ಈ ರೀತಿ ಹೇಳಿ ನನ್ನ ಮೇಲೆ ಆರೋಪ ಹೊರಿಸಿದ್ದಾರೆ ಎಂದು ಪತ್ರಿಕಾ ಗೋಷ್ಟಿಯಲ್ಲಿ ಹೇಳಿಕೆ ನೀಡಿದ್ದರು.

RELATED ARTICLES

Related Articles

TRENDING ARTICLES