ಬೆಂಗಳೂರು : ‘ಪರೀಕ್ಷೆ ಹತ್ತಿರಬರುತ್ತಿದೆ, ಮೊಬೈಲ್ ಬಿಟ್ಟು ಓದ್ಕೋ’ ತಾಯಿ ಬುದ್ದಿ ಹೇಳಿದ್ದಕ್ಕೆ ಮನನೊಂದ ಬಾಲಕಿಯೊಬ್ಬಳು ಅಪಾರ್ಟಮೆಂಟ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು. ಮೃತ ವಿದ್ಯಾರ್ಥಿನಿಯನ್ನು 15 ವರ್ಷದ ಅವಂತಿಕಾ ಚೌರಾಸಿಯಾ ಎಂದು ಗುರುತಿಸಲಾಗಿದೆ.
ಇತ್ತೀಚೆಗೆ ನಮ್ಮ ಯುವ ಸಮುದಾಯ ಸಣ್ಣ, ಪುಟ್ಟ ವಿಚಾರಗಳಿಗೂ ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದು. ಇದೀಗ ಮತ್ತೋರ್ವ ಬಾಲಕಿ ಅರ್ಪಾಟ್ಮೆಂಟ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಡುಗೋಡಿಯ ಅಸೆಟ್ಸ್ಮಾರ್ಕ್ ಅಪಾರ್ಟ್ಮೆಂಟ್ನಲ್ಲಿ ಘಟನೆ ನಡೆದಿದ್ದು. ತಾಯಿ ‘ಪರೀಕ್ಷೆ ಹತ್ತಿರ ಬರುತ್ತಿದೆ, ಮೊಬೈಲ್ ಬಿಟ್ಟು ಓದ್ಕೋ’ ಎಂದು ಹೇಳಿದ್ದಕ್ಕೆ ಮನನೊಂದ ಅವಂತಿಕಾ ಚೌರಾಸಿಯಾ ಅಪಾರ್ಟ್ಮೆಂಟ್ನ 20ನೇ ಪ್ಲೋರ್ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಇದನ್ನೂ ಓದಿ : ಚಲಿಸುತ್ತಿದ್ದ ಬಸ್ನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಸಾ*ವು
ಘಟನಾ ಸ್ಥಳಕ್ಕೆ ಕಾಡುಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ವಿದ್ಯಾರ್ಥಿನಿ SSLC ಓದುತ್ತಿದ್ದಳು ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.