ಶಿವಮೊಗ್ಗ : ಚಲಿಸುತ್ತಿದ್ದ ಸಿಟಿ ಬಸ್ಸಿನಿಂದ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು. ಬಸ್ಸಿನ ಪುಟ್ ಬೋರ್ಡ್ ಮೇಲೆ ನಿಂತಿದ್ದ ವಿದ್ಯಾರ್ಥಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಮೃತ ವಿದ್ಯಾರ್ಥಿಯನ್ನು ಯಶ್ವಂತ್ ಎಂದು ಗುರುತಿಸಲಾಗಿದೆ.
ಶಿವಮೊಗ್ಗದ ಬಿಎಚ್.ರಸ್ತೆಯಲ್ಲಿ ಮೈಲಾರೇಶ್ವರ ದೇವಾಲಯದ ಮುಂಭಾಗದ ರಸ್ತೆಯಲ್ಲಿ ದುರ್ಘಟನೆ ನಡೆದಿದ್ದು. ಗುರುಪುರದ ನಿವಾಸಿ ಯಶ್ವಂತ್ ಯಶ್ವಂತ್ ನಗರದ ನ್ಯಾಷನಲ್ ಪಿಯು ಕಾಲೇಜಿಲ್ಲಿ ಪಿಯುಸಿ ಓದುತ್ತಿದ್ದ. ಕಾಲೇಜಿಗೆ ಎಂದು ಬಸ್ಸಿನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿ ಬಸ್ ಒಳಗೆ ಸಾಕಷ್ಟು ರಶ್ ಇದ್ದ ಕಾರಣ ಬಸ್ಸಿನ ಪುಟ್ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ.
ಇದನ್ನೂ ಓದಿ :ಉಚಿತ ಭಾಗ್ಯಗಳಿಂದ ಜನರು ಕೆಲಸ ಮಾಡಲು ಸಿದ್ದರಿಲ್ಲ : ಸುಪ್ರೀಂ ಕೋರ್ಟ್
ಈ ವೇಳೆ ಬಸ್ಸಿನಿಂದ ವಿದ್ಯಾರ್ಥಿ ಆಯತಪ್ಪಿ ಕೆಳಗೆ ಬಿದ್ದಿದ್ದು. ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಘಟನೆಯ ದೃಷ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು. ಘಟನೆ ಸಂಬಂಧ ಸಂಚಾರಿ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.