ಹಾಸನ : ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪಾದಾಚಾರಿಗಳ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದ್ದು. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮೃತ ದುರ್ದೈವಿಗಳನ್ನು 60 ವರ್ಷದ ಸುರೇಶ್ ಮತ್ತು 55 ವರ್ಷದ ಕುಮಾರ್ ಎಂದು ಗುರುತಿಸಲಾಗಿದೆ.
ಹಾಸನ ತಾಲ್ಲೂಕಿನ, ಕೆಂಚಟ್ಟಹಳ್ಳಿ ಬಳಿ ಘಟನೆ ನಡೆದಿದ್ದು. ಮಂಡ್ಯ ಜಿಲ್ಲೆ, ಕೆ.ಆರ್.ಪೇಟೆ ತಾಲ್ಲೂಕಿನ, ಆನಗೋಳು ಗ್ರಾಮದವರಾದ ಸುರೇಶ್, ಕುಮಾರ್ ಮತ್ತು ದಿನೇಶ್ ಧರ್ಮಸ್ಥಳಕ್ಕೆ ಇಂದು ಮುಂಜಾನೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಖಾಸಗಿ ಬಸ್ವೊಂದು ಡಿಕ್ಕಿ ಹೊಡೆದಿದ್ದು. ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ :ಇಂಡೋ-ಪಾಕ್ ನಡುವೆ ಹೈ ವೋಲ್ಟೇಜ್ ಕದನ: ಅಭಿಮಾನಿಗಳಿಂದ ವಿಶೇಷ ಪೂಜೆ !
ಘಟನೆಯಲ್ಲಿ ದಿನೇಶ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು. ಈತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು. ಘಟನಾ ಸ್ಥಳಕ್ಕೆ ಶಾಂತಿಗ್ರಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.