ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಆರೋಪಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ಏಪ್ರಿಲ್ 8ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ದರ್ಶನ್ ಪರ ವಕೀಲ ವಾದ ಮಂಡನೆ ಮಾಡಿದ್ದು. ದರ್ಶನ್ ವಿರುದ್ದ ಸಾಕ್ಷಿ ಹೇಳುವಂತೆ ಇತರ ಆರೋಪಿಗಳಿಗ ಒತ್ತಡ ಹೇರಲಾಗುತ್ತಿದೆ ಎಂದು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ನಟ ದರ್ಶನ್ ಮತ್ತು ಇತರ ಆರೋಪಿಗಳು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಆರೋಪಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ಏಪ್ರೀಲ್ 8ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಪೊಲೀಸರು ವಕೀಲರ ಹೆಸರಲ್ಲಿ ಆರೋಪಿಗಳನ್ನು ಭೇಟಿಯಾಗಿ ಅಪ್ರೂವಲ್ ಆಗುವಂತೆ ಒತ್ತಡ ಹೇರಿದ್ದಾರೆ ಎಂದು ವಕೀಲ ಸುನೀಲ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ :ಬೆಳಗಾವಿಯಲ್ಲಿ ಮರಾಠಿ ಇತ್ತು ಎಂಬ ಕುರುಹು ಇಲ್ಲದಂತೆ ಮಾಡುತ್ತೇವೆ: ಕರವೇ ನಾರಯಣ ಗೌಡ
ಈ ಕುರಿತು ದರ್ಶನ್ ಪರ ವಕೀಲ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು. ‘ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಉಳಿದ ಆರೋಪಿಗಳಿಗೆ ಒತ್ತಡ ಏರುತ್ತಿದ್ದಾರೆ. ಅಪ್ರೂವಲ್ ಆಗಿ ಎಂದು ಪದೇ ಪದೇ ನಮ್ಮ ಕಕ್ಷಿದಾರರಿಗೆ ಒತ್ತಡ ಇದೆ. ಪೊಲೀಸರು ವಕೀಲರ ಹೆಸರಲ್ಲಿ ಕೆಲ ಆರೋಪಿಗಳನ್ನು ಭೇಟಿಯಾಗಿ ಈ ರೀತಿ ಮಾಡುತ್ತಿದ್ದಾರೆ. ಈ ವಿಷಯದ ಕುರಿತು ನ್ಯಾಯಾಲಯದ ಗಮನಕ್ಕೆ ತಂದಿದ್ದೇವೆ. ಈ ಕುರಿತು ಅರ್ಜಿ ಸಲ್ಲಿಸುವಂತೆ ಜಡ್ಜ್ ಸೂಚನೆ ನೀಡಿದ್ದಾರೆ ಎಂದು ದರ್ಶನ್ ಪರ ವಕೀಲ ಸುನೀಲ್ ಮಾಧ್ಯಮಕ್ಕೆ ಮಾಹಿತಿ ನೀಡಿದರು.