ಚೆನ್ನೈ: ಆರ್ಸಿಬಿ ಮತ್ತು ಚೆನೈ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಆರ್ಸಿಬಿ ಗೆದ್ದು ಬೀಗಿದೆ. ಅದರಲ್ಲೂ 18 ವರ್ಷಗಳ ನಂತರ ಚೆನೈನ ಚೆಪಾಕ್ ಕೋಟೆಯಲ್ಲಿ ಸಿಎಸ್ಕೆ ತಂಡವನ್ನು ಸೋಲಿಸುವ ಮೂಲಕ 17 ವರ್ಷಗಳ ಈ ಸಾಧನೆ ಮಾಡಿದೆ. ಇದರ ನಡುವೆ ಬೆಂಗಳೂರು ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ ಎಕ್ಷ್ ಖಾತೆಯಲ್ಲಿ ಆರ್ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಮಲ್ಯಾ, 18 ವರ್ಷಗಳ ನಂತರ ಚೆಪಾಕ್ ಕೋಟೆಯಲ್ಲಿ ದಕ್ಷಿಣದ ಎದುರಾಳಿ ಸಿಎಸ್ಕೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಕ್ಕಾಗಿ ಆರ್ಸಿಬಿ ತಂಡಕ್ಕೆ ಅಭಿನಂದನೆಗಳು. ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಅತ್ಯುತ್ತಮ ಆಲ್ರೌಂಡ್ ಪ್ರದರ್ಶನ ನೀಡಿದ್ದೀರಿ. ಧೈರ್ಯಶಾಲಿ ಹುಡುಗರೇ, ಇನ್ನೂ ಚೆನ್ನಾಗಿ ಆಟವಾಡಿ ಎಂದು ಶುಭಾಶಯ ತಿಳಿಸಿದ್ದಾರೆ. ಕೆಕೆಆರ್ ವಿರುದ್ದ ಮೊದಲ ಪಂದ್ಯದಲ್ಲೂ ಆರ್ಸಿಬಿ ಜಯಗಳಿಸಿದಾಗಲೂ ವಿಜಯ್ ಮಲ್ಯ ಅಭಿನಂದನೆ ತಿಳಿಸಿದ್ದಾರೆ.
ಇದನ್ನೂ ಓದಿ :ಶ್ರೀ ವಿಶ್ವಾವಸು ನಾಮ ಸಂವತ್ಸರದ ದ್ವಾದಶ ರಾಶಿಗಳ ಫಲಾಫಲಗಳು..!
ನೆನ್ನೆಯ (ಮಾ.28) ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿದ ಆರ್ಸಿಬಿ ತಂಡ 20 ಓವರ್ಗಳಲ್ಲಿ 7 ವಿಕೆಟ್ಗಳನ್ನು ಕಳೆದುಕೊಂಡು 196ರನ್ ಗಳಿಸಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಸಿಎಸ್ಕೆ ತಂಡ 20 ಓವರ್ಗಳಲ್ಲಿ ಕೇವಲ 146ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಆರ್ಸಿಬಿ 50ರನ್ಗಳಿಂದ ಚೆಪಾಕ್ ಅಂಗಳದಲ್ಲಿ ಗೆದ್ದುಬೀಗಿದೆ.