ದೇವನಹಳ್ಳಿ : ಏಪೋರ್ಟ್ ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು. ಅಪಘಾತದಲ್ಲಿ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದೆ. ಜೊತೆಗೆ ಬಸ್ನಲ್ಲಿದ್ದ ಏಪೋರ್ಟ್ ಸಿಬ್ಬಂದಿಗಳಿಗೂ ಚಿಕ್ಕಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಳ ಗೇಟ್ ಬಳಿ ಅಪಘಾತ ಸಂಭವಿಸಿದ್ದು. ಏಪೋರ್ಟ್ ಸಿಬ್ಬಂದಿಯನ್ನು ಪಿಕಪ್ ಮಾಡಿಕೊಂಡು ಏಪೋರ್ಟ್ ಕಡೆಗೆ ಹೋಗುತ್ತಿದ್ದ ಮಿನಿ ಬಸ್ ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾಗದೆ. ಅಪಘಾತದಲ್ಲಿ ಬಸ್ ಮುಂಭಾಗ ಸಂಪೂರ್ಣ ಜಖಂ ಆಗಿದ್ದು. ಬಸ್ ಚಾಲಕನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ :ಕೋರ್ಟ್ಗೆ ಚಕ್ಕರ್, ಸಿನಿಮಾಗೆ ಹಾಜರ್; ಶಿಷ್ಯನ ಜೊತೆ ಸಿನಿಮಾ ವೀಕ್ಷಿಸಿದ ದರ್ಶನ್
ಇನ್ನು ಬಸ್ನಲ್ಲಿದ್ದ ಸಿಬ್ಬಂದಿಗಳಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು. ಅವರನ್ನೆಲ್ಲಾ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ದೇವನಹಳ್ಳೀ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.