Tuesday, April 15, 2025

ಭೀಕರ ಅಪಘಾತ; ಕೆಟ್ಟು ನಿಂತಿದ್ದ ಕ್ಯಾಂಟರ್​ಗೆ ಬಸ್​ ಡಿಕ್ಕಿಯಾಗಿ 20ಕ್ಕು ಹೆಚ್ಚು ಪ್ರಯಾಣಿಕರಿಗೆ ಗಾಯ

ರಾಮನಗರ : ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಕ್ಯಾಂಟರ್​ಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು. ಘಟನೆಯಲ್ಲಿ 20ಕ್ಕು ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು. ಮಾಗಡಿ ತಾಲೂಕಿನ ಸೋಲೂರು ಸಮೀಪ ಘಟನೆ  ಘಟಿಸಿದೆ. ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ KSRTC ಬಸ್ ರಸ್ತೆ ಬದಿಯಲ್ಲಿ ಟೈರ್​ ಪಂಚರ್​ ಆಗಿ ಕೆಟ್ಟು ನಿಂತಿದ್ದ ಕ್ಯಾಂಟರ್​ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಸಂಪೂರ್ಣ ಬಸ್​ ನಜ್ಜುಗುಜ್ಜಾಗಿದ್ದು. ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ.

ಇದನ್ನೂ ಓದಿ :ಮೈಮುಟ್ಟಿ ಸ್ಕ್ಯಾನಿಂಗ್​ ಮಾಡಿದ್ದಕ್ಕೆ ಹಲ್ಲೆ; ಮುಟ್ಟದೆ ಸ್ಕ್ಯಾನಿಂಗ್ ಹೇಗೆ ಮಾಡುವುದು ಎಂದು ವೈದ್ಯರ ಪ್ರತಿಭಟನೆ

ಅಪಘಾತದ ರಭಸಕ್ಕೆ ಬಸ್​ ಮುಂಭಾಗ ಸಂಪೂರ್ಣ ಜಖಂ ಆಗಿದ್ದು. ಬಸ್​ ಮುಂಭಾಗ ಸಿಲುಕಿದ್ದ ಡ್ರೈವರ್​ನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಅಪಘಾತದಲ್ಲಿ ಡ್ರೈವರ್​ ಕೈ ಮುರಿದಿದ್ದು. ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು. ಸ್ಥಳಕ್ಕೆ ಸೋಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES