Wednesday, April 16, 2025

ಬಿಗ್​ಬಾಸ್​ ಸ್ಫರ್ಧಿ ರಜತ್​ ಅರೆಸ್ಟ್​; ಮತ್ತೇನು ಮಾಡಿದ್ರು ಗೊತ್ತಾ..!

ಬೆಂಗಳೂರು : ಬಿಗ್​ಬಾಸ್​ ಮಾಜಿ ಸ್ಫರ್ಧಿ ರಜತ್​ನನ್ನು ಬಸವೇಶ್ವರ ನಗರ ಪೊಲೀಸರು ಮತ್ತೊಮ್ಮೆ ಬಂಧಿಸಿದ್ದು. ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ರಜತ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳೆದ ಒಂದು ತಿಂಗಳ ಹಿಂದೆ ಬಿಗ್‌ಬಾಸ್ ಸ್ಫರ್ಧಿ ರಜತ್​ ಮತ್ತು ವಿನಯ್​ ಮಚ್ಚು ಹಿಡಿದು ರೀಲ್ಸ್​ ಮಾಡಿದ್ದ ಆರೋಪದ ಮೇಲೆ ಬಸವೇಶ್ವರ್​ ನಗರ ಪೊಲೀಸರು ಬಂಧಿಸಿದ್ದರು. ಮೂರು ದಿನಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ರಜತ್​ ಮತ್ತು ವಿನಯ್​ ಷರತ್ತುಬದ್ದ ಜಾಮೀನು ಪಡೆದು ಜೈಲಿನಿಂದ ಆಚೆ ಬಂದಿದ್ದರು. ಇದೀಗ ಮತ್ತೊಮ್ಮೆ ರಜತ್​ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಲೈಂಗಿಕ ದೌರ್ಜನ್ಯ

ಷರತ್ತುಬದ್ದ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ ರಜತ್, ಇಂದು ಬಸವೇಶ್ವರ್ ನಗರ ಪೊಲೀಸ್​ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಷರತ್ತುಬದ್ದ ಜಾಮೀನು ನೀಡಿದ್ದ ನ್ಯಾಯಾಲಯ ಆರೋಪಿಗಳು ಪ್ರತಿ ವಿಚಾರಣೆಗೂ ಹಾಜರಾಗೂವಂತೆ ಸೂಚನೆ ನೀಡಿತ್ತು. ಆದರೆ ರಜತ್​ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಗೈರಾಗಿದ್ದರು. ಇದಕ್ಕೆ ನ್ಯಾಯಾಲಯ ಆರೋಪಿಯನ್ನು ಬಂಧಿಸುವಂತೆ ವಾರೆಂಟ್​ ಹೊರಡಿಸಿತ್ತು. ಈ ಹಿನ್ನಲೆ ಪೊಲೀಸ್​ ಠಾಣೆಗೆ ವಿಚಾರಣೆಗೆ ಬಂದಿದ್ದ ರಜತ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದ್ದು. ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES